ಬೆಂಗಳೂರು, ಜು. 14 : ದೇಶದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐಓ ಕನೆಕ್ಟ್ (Google IO Connect) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು `ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವುದು ಮತ್ತು ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ಸಂಯೋಜಿಸುವುದು. ಎಐ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು, ಸುಧಾರಿತ ಸಂಶೋಧನೆಯನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ಸಹಯೋಗವನ್ನು ಬೆಳೆಸಲು ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದರು.
ಎಐ-ಸಹಾಯದ ಬೋಧನೆಯ ಮೂಲಕ ಶಿಕ್ಷಣ ಕ್ಷೇತ್ರ, ರೋಗಗಳ ಮುಂಚಿತ ಪತ್ತೆ ಮತ್ತು ಉತ್ತಮ ವೈದ್ಯಕೀಯ ಬೆಂಬಲದ ಮೂಲಕ ಆರೋಗ್ಯ ಕ್ಷೇತ್ರ, ರೈತರಿಗೆ ಎಐ-ಚಾಲಿತ ಸಲಹಾ ಸೇವೆಗಳ ಮೂಲಕ ಕೃಷಿ ಕ್ಷೇತ್ರ, ವೇಗದ ಮತ್ತು ಜನಸ್ನೇಹಿ ವಿತರಣೆಯ ಮೂಲಕ ಸರ್ಕಾರಿ ಸೇವೆಗಳು, ಎಐ ಪರಿಕರಗಳನ್ನು ಬಳಸಿಕೊಂಡು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಮೂಲಕ ಸಣ್ಣ ಉದ್ಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ತಿಳಿಸಿದರು.



