ಗ್ಯಾರಂಟಿ ಘೋಷಿಸಿ ಸಿದ್ಧರಾಮಯ್ಯ ಗೆಲುವು ಪ್ರಶ್ನಿಸಿ ಅರ್ಜಿ – ನೋಟೀಸ್ ನೀಡಿದ ಸುಪ್ರೀಂ ಕೋರ್ಟ್

Advertisement

ಹೊಸದಿಲ್ಲಿ, ಡಿ.08 : ಉಚಿತ ಗ್ಯಾರಂಟಿಯ ಭರವಸೆ ನೀಡಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಭೂತಪೂರ್ವ ಜಯ ದಾಖಲಿಸಿ, ಕರ್ನಾಟಕದ ಚುಕ್ಕಾಣಿ ಹಿಡಿದಿತ್ತು. ಇದೀಗ ಇದೇ ಉಚಿತ ಗ್ಯಾರಂಟಿ ವಿಚಾರವಾಗಿ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಚಿತ ಗ್ಯಾರಂಟಿ ಕೊಡುಗೆಗಳನ್ನು ಘೋಷಿಸಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವು ಸಾಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ಸೋಮವಾರ ಸುಪ್ರೀಂಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

Advertisement

ನ್ಯಾ. ವಿಕ್ರಂ ನಾಥ್ ಹಾಗೂ ನ್ಯಾ. ಸಂದೀಪ್ ಮೆಹ್ರಾರನ್ನೊಳಗೊಂಡ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ವರುಣಾ ವಿಧಾನಸಭಾ ಕ್ಷೇತ್ರದ ಮತದಾರ ಶಂಕರ ಎಂಬವರು ಸಲ್ಲಿಸಿದ್ದ ಅರ್ಜಿಯ ಮೇಲ್ಮನವಿಯ ಕುರಿತು ಪೀಠವು ವಿಚಾರಣೆ ನಡೆಸುತ್ತಿತ್ತು. ಆರಂಭದಲ್ಲಿ ಈ ಅರ್ಜಿಯನ್ನು ವಜಾಗೊಳಿಸಲು ನ್ಯಾಯಪೀಠ ಒಲವು ತೋರಿತಾದರೂ, ಎಸ್.ಸುಬ್ರಮಣಿಯನ್ ವರ್ಸಸ್ ತಮಿಳುನಾಡು ಸರಕಾರದ ಪ್ರಕರಣದಲ್ಲಿ ಚುನಾವಣಾ ಪೂರ್ವ ಆಶ್ವಾಸನೆಗಳು ಭ್ರಷ್ಟಾಚಾರಕ್ಕೆ ಸಮ ಎಂದು ಘೋಷಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಯು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಹಾಗೂ ನ್ಯಾ ಎಂ.ಎಂ.ಸುಂದರೇಶ್ ನೇತೃತ್ವದ ಸಮನ್ವಯ ನ್ಯಾಯಪೀಠದ ಮುಂದೆ ಇತ್ಯರ್ಥಕ್ಕೆ ಭಾಕಿ ಇದೆ ಎಂಬ ಅಂಶವನ್ನು ಪರಿಗಣನೆಗೆ ತೆಗೆದುಕೊಂಡು, ಇದೇ ಬಗೆಯ ಪ್ರಕರಣದಲ್ಲಿ ಸೋಮವಾರ ನೋಟಿಸ್ ಜಾರಿಗೊಳಿಸಿತು.

Advertisement

ಹೀಗಿದ್ದೂ “ಪ್ರಣಾಳಿಕೆಯಲ್ಲಿನ ಘೋಷಣೆಗಳು ಹೇಗೆ ಭ್ರಷ್ಟಾಚಾರಕ್ಕೆ ಸಮವಾಗುತ್ತವೆ?” ಎಂದು ವಿಚಾರಣೆಯ ವೇಳೆ ನ್ಯಾ ವಿಕ್ರಂ ನಾಥ್ ಪ್ರಶ್ನಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ