ಬೆಳ್ತಂಗಡಿ : ಫೋಕ್ಸೋ ಪ್ರಕರಣದ ಆರೋಪಿ ಅಮ್ಮದ್ ಖಾನ್ ಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಅದೇಶಿಸಿದೆ.
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಆರೋಪಿ ಅಮ್ಮದ್ ಖಾನ್ (18) ಎಂಬವರ ವಿರುದ್ಧ ನ.25ರಂದು ಫೋಕ್ಸೋ ಕಾಯ್ದೆ ಕಲಂ 4ಮತ್ತು 6ಅಡಿಯಲ್ಲಿ ಪ್ರಕರಣ ದಾಖಲಿಸಿ ನ.27ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಪ್ರಕರಣದಲ್ಲಿ ಡಿ.15ರಂದು ಆರೋಪಿಯ ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಹಾಕಿದ್ದ. ಇದೀಗ ಆರೋಪಿಯ ಜಾಮೀನು ಅರ್ಜಿಯನ್ನು ಪರಿಶೀಲಿಸಿ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಆರೋಪಿಗೆ ಡಿ.24ರಂದು ಜಾಮೀನು ಮಂಜೂರು ಮಾಡಿರುತ್ತದೆ.
ಆರೋಪಿ ಪರವಾಗಿ ವಕೀಲರಾದ ಉಮರುಲ್ ಫಾರೂಕ್ ನೆಲ್ಯಾಡಿ, ಸಿರಾಜುದ್ದೀನ್ ಎ ಜೋಗಿಬೆಟ್ಟು ವಾದಿಸಿದರು.


