ಕಾರ್ಕಳ : ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ : ಅಪಾಯದಿಂದ ಪಾರಾದ ಮನೆಮಂದಿ

ಕಾರ್ಕಳ, ಜ. 16 : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಘಟನೆಯಿಂದಾಗಿ ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ

Advertisement

ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಳಗಾಗಿದೆ.

ಮನೆಯ ಹೊರಪಾರ್ಶ್ವದಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಸುಮಾರು 3 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.