ಚಿಕ್ಕಮಗಳೂರು : ಹಿಂದೂಗಳ ಆರಾಧ್ಯ ಪೀಠವಾಗಿರುವ ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ಆರಂಭಗೊಂಡಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲೆಯಾದ್ಯಂತ ಖಾಕಿ ಸರ್ಪಗಾವಲು ಹಾಕಲಾಗಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಹಾಗೂ ಗಿರಿ ಭಾಗಕ್ಕೆ ಪ್ರವಾಸಿಗರಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಒಟ್ಟು 6200 ಪೊಲೀಸರ ಭದ್ರತೆಯಲ್ಲಿ ದತ್ತಜಯಂತಿ ನಡೆಯಲಿದ್ದು, ನಗರದಲ್ಲಿ ಬಿಗಿ ಪೊಲೀಸರು ಸರ್ಪಗಾವಲು ಹಾಕಿದ್ದಾರೆ.
ಇಂದು ಮಾಲಾಧಾರಿ ಸಿ.ಟಿ.ರವಿ ಭಿಕ್ಷಾಟನೆ ನಡೆಸಲಿದ್ದಾರೆ. ಮಧ್ಯಾಹ್ನ 15 ಸಾವಿರಕ್ಕೂ ಅಧಿಕ ದತ್ತಭಕ್ತರಿಂದ ಬೃಹತ್ ಶೋಭಾಯಾತ್ರೆಯು ಶ್ರೀ ಕ್ಷೇತ್ರಕ್ಕೆ ಸಾಗಿ ಬರಲಿದೆ. ಸಾವಿರಾರು ಮಂದಿ ದತ್ತ ಮಾಲಾಧಾರಿಗಳು ಈ ದತ್ತಜಯಂತಿ ಉತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

