ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.15 ರಿಂದ 20ರವರೆಗೆ ಲಕ್ಷ ದೀಪೋತ್ಸವ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ವಾರ್ಷಿಕ ಲಕ್ಷದೀಪೋತ್ಸವವು ನವೆಂಬರ್ 15ರಂದು ಆರಂಭಗೊಂಡು ನ.20ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜ್ರಂಭಣೆಯಿಂದ ನಡೆಯಲಿದೆ. ನ. 15ರಂದು ಬೆಳಗ್ಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಗೊಳ್ಳಲಿದೆ. ರಾತ್ರಿ ಶ್ರೀ ಮಂಜುನಾಥ ಸ್ವಾಮಿಗೆ ಹೊಸಕಟ್ಟೆ ಉತ್ಸವ, ನ.16ರಂದು ಕೆರೆಕಟ್ಟೆ ಉತ್ಸವ, ನ.18ರಂದು ಕಂಚಿಮಾರುಕಟ್ಟೆ ಉತ್ಸವ, ನ.19ರಂದು ಗೌರಿಮಾರುಕಟ್ಟೆ ಉತ್ಸವ, ನ. 20ರಂದು ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ಜರುಗಲಿದೆ.

Advertisement

ನ. 15ರಂದು ಸಂಜೆ ಭಕ್ತಾದಿಗಳಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭಕ್ತಿ ಭಜನೆಯ ಪಾದಯಾತ್ರೆ ನಡೆಯಲಿದೆ. ನ. 17ರಂದು ಲಲಿತೋದ್ಯಾನ ಉತ್ಸವ ಹಾಗೂ ಆಮೃತವರ್ಷಿಣಿ ಸಭಾಭವನದಲ್ಲಿ ಲಲಿತಕಲಾಗೋಷ್ಠಿ ನಡೆಯಲಿದೆ. ನ.18ರಂದು ಸರ್ವಧರ್ಮ ಸಮ್ಮೇಳನ, ನ.19ರಂದು ಸಾಹಿತ್ಯ ಸಮ್ಮೇಳನ ನಡೆಯಲಿದೆ. ನವೆಂಬರ್ 20ರಂದು ಲಕ್ಷ ದೀಪೋತ್ಸವ ಸಮಾಪನಗೊಳ್ಳಲಿದೆ. ದೇಶದಾದ್ಯಂತದಿಂದ ಲಕ್ಷಾಂತರ ಭಕ್ತ ಸಮೂಹವೇ ಶ್ರೀ ಕ್ಷೇತ್ರದ ಲಕ್ಷ ದೀಪೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.