ಅಡ್ಡ ಮತದಾನ ವಿವಾದ : ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

ಬೆಳ್ತಂಗಡಿ, ಜೂ. 30 : ರಾಜ್ಯ ವಿಧಾನ ಪರಿಷತ್ ಚುನವಾಣೆಯಲ್ಲಿ ಬಿಜೆಪಿ ಪಾಳಯದಲ್ಲಿ ನಡೆದ ಅಡ್ಡ ಮತದಾನ ತೀವ್ರ ಚರ್ಚೆಯಾಗುತ್ತಿದ್ದು, ಹಾಸನ ಜಿಲ್ಲೆಯ ಬೇಲೂರು ಶಾಸಕ ಹುಲ್ಲಹಳ್ಳಿ ಕೆ.ಸುರೇಶ್ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದರು.

Advertisement

ಧರ್ಮಸ್ಥಳಕ್ಕೆ  ಭೇಟಿ ನೀಡಿದ ಅವರು ಮಂಜುನಾಥ ಸ್ವಾಮಿಯ ದರ್ಶನ ಪಡೆದು ನನ್ನ ಮೇಲೆ ಅಪಪ್ರಚಾರ ಮಾಡಿದವರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿ ತನ್ನ ನಂಬಿದ ಜನತೆ ಹಾಗೂ ಆರೋಪಕ್ಕೆ  ಸಲುವಾಗಿ ಕಾಣಿಕೆಯನ್ನು ಹುಂಡಿಗೆ ಹಾಕಿದರು.

ನಾನು ಪಕ್ಷ ದ್ರೋಹ ಮಾಡಿಲ್ಲ, ಬಿಜೆಪಿಯ ನಿಷ್ಟವಾಂತ ಪ್ರಾಮಾಣಿಕ ಕಾರ್ಯಕರ್ತ. ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿಲ್ಲ, ಪಕ್ಷದ ವರಿಷ್ಠರು ಸೂಚಿಸಿದ ವ್ಯಕ್ತಿಗೆ ಮತದಾನ ಮಾಡಿದ್ದೇನೆ ಎಂದು ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಬಂದಿರುವ ಆರೋಪಕ್ಕೆ ಮಂಜುನಾಥ ಸ್ವಾಮಿಯೇ ಹಾಗೂ ನನ್ನ ಕ್ಷೇತ್ರದ ಜನರೇ ಸಾಕ್ಷಿ. ಬಿಜೆಪಿ ಪಕ್ಷ ನನ್ನ ತಾಯಿ ಹಾಗಾಗಿ ನನ್ನ ಬೆಳವಣಿಗೆಯನ್ನು ಸಹಿಸಲಾರದೆ ಕೆಲವರು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ಹೆಚ್ ಕೆ. ಸುರೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ ಅಣ್ಣಪ್ಪ ಬೆಟ್ಟದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ  ನಾನು ಮೋಸ ಮಾಡಿಲ್ಲ  ಅಪಪ್ರಚಾರ ಮಾಡಿದವರಿಗೆ ಒಳ್ಳೆಯ ಬುದ್ಧಿ ನೀಡಲಿ ಎಂದು ಹೇಳಿ ತೆಂಗಿನಕಾಯಿ ಒಡೆದರು. ” 250ಕ್ಕೂ ಅಧಿಕ ಮಂದಿ ಬೆಂಬಲಿಗರು 100ಕ್ಕೂ ಮಿಕ್ಕಿ ಕಾರಿನಲ್ಲಿ ಕೇಸರಿ ಶಾಲು, ಬಿಜೆಪಿ ಪಕ್ಷದ ಬಾವುಟ ಹಿಡಿದುಕೊಂಡು ಧರ್ಮಸ್ಥಳಕ್ಕೆ ಆಗಮಿಸಿದರು. ಪವಿತ್ರ ನೇತ್ರಾವತಿ ನದಿಯಲ್ಲಿ ತೀರ್ಥ ಪ್ರೋಕ್ಷಣೆ ಮಾಡಿ  ನಮಸ್ಕರಿಸಿದ  ಬಳಿಕ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಕಾರ್ಯರ್ಕತರು ” ನಮ್ಮ ಶಾಸಕರು ಪ್ರಾಮಾಣಿಕ ಶಾಸಕರು, ನಾವು ದ್ರೋಹ ಮಾಡಿಲ್ಲ” ಎನ್ನುತ್ತಾ ಭಾರತ ಮಾತೆಗೆ ಜೈಕಾರ ಕೂಗಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.