ಬೆಳ್ತಂಗಡಿ : ಅಕ್ರಮವಾಗಿ ಮನೆಯಲ್ಲಿ 3.5 ಲಕ್ಷ ಮೌಲ್ಯದ ಡೀಸೆಲ್ ಸಂಗ್ರಹ – ಪೊಲೀಸರಿಂದ ದಾಳಿ

ಬೆಳ್ತಂಗಡಿ, ಮಾ. 10 : ಅಕ್ರಮವಾಗಿ ಡಿಸೇಲ್ ದಾಸ್ತಾನು ಮಾಡಿದ್ದ ಅಡ್ಡೆಯ ಮೇಲೆ ಖಚಿತ ಮಾಹಿತಿ ಮೇರೆಗೆ ಮಾ.9 ರಂದು ಮಧ್ಯರಾತ್ರಿ 1 ಗಂಟೆಗೆ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಸಿ ಸಿ.ಕೆ ಮತ್ತು ಸಿಬ್ಬಂದಿ ಪ್ರವೀಣ್ ಮುರುಗೋಳಿ ಚಾಲಕ ಪ್ರವೀಣ್ ಮಾ.9 ರಂದು ಮದ್ಯ ರಾತ್ರಿ ರೌಡ್ಸ್ ನಲ್ಲಿರುವಾಗ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ, ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದೆಲ್ಲಿಯಾರ್ ಎಂಬಲ್ಲಿನ ಬನಶಂಕರಿ ನಿಲಯದ ದಿ.ಮುತ್ತಪ್ಪ ಗೌಡರ ಮಗ ಜಗದೀಶ್(35) ಎಂಬುವವರ ಮನೆಯ ಹಿಂಭಾಗದ ಶೆಡ್ ಮೇಲೆ 1 ಗಂಟೆ ಸುಮಾರಿಗೆ ದಾಳಿ ನಡೆಸಿದಾಗ ಅಕ್ರಮವಾಗಿ 20 ಬ್ಯಾರಲ್ ನಲ್ಲಿ 200 ಲೀಟರ್ ನಂತೆ ಒಟ್ಟು 4,000 ಲೀಟರ್, 5 ಬ್ಯಾರಲ್ ಕ್ಯಾನ್ ನಲ್ಲಿ 35 ಲೀಟರ್ ನಂತೆ ಒಟ್ಟು 175 ಡೀಸೆಲ್ ಹಾಗೂ 5 ಖಾಲಿ ಕ್ಯಾನ್ ಗಳನ್ನು 4,175 ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 3 ಲಕ್ಷದ 50 ಸಾವಿರ ರೂಪಾಯಿ ಆಗಿರುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಜಗದೀಶ್ ಮತ್ತು ಹರೀಶ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮಾ. 10 ರಂದು ಡಿವೈಎಸ್ಪಿ ರೋಹಿನಿ.ಸಿ.ಕೆ287 BNS, 3,7 ಇಸಿ ಆಕ್ಟ್ ಪೆಟ್ರೋಲಿಯಂ 23 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ಶ್ರೀ ರೋಹಿನಿ.ಸಿ.ಕೆ ನೇತೃತ್ವದಲ್ಲಿ, ಉಪ್ಪಿನಂಗಡಿ ಪ್ರೋಪೆಷನರಿ ಐಪಿಎಸ್ ಶ್ರೀ ಅನ್ಯನ ಶ್ರೀವಾತ್ಸವ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಾಗರಾಜ್, ಸಬ್ ಇನ್ಸ್‌ಪೆಕ್ಟರ್ ಸುತೇಶ್ ಕುಮಾ‌ರ್, ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಪ್ರವೀಣ್ ಮುರುಗೋಳಿ, ಲಾರೆನ್ಸ್.ಪಿ.ಆರ್, ಮನೋಹರ, ಚಾಲಕ ಪ್ರವೀಣ್, ಎಫ್‌ಎಸ್ಎಲ್ ವಿಭಾಗದ ಸೊಕೊ ತಂಡದ ಕಾವ್ಯಶ್ರೀ ಹಾಗೂ ಬೆಳ್ತಂಗಡಿ ಆಹಾರ ಇಲಾಖೆಯ ಆಹಾರ ನಿರೀಕ್ಷಕ ವಿಶ್ವ.ಕೆ, ಆಹಾರ ಶಿರಸ್ತೇದಾರ ಸಂತೋಷ್.ಜಿ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.