ಬೆಂಗಳೂರು : ಮಿನಿ ರಾಜ್ಯ ಒಲಿಂಪಿಕ್ ನಲ್ಲಿ ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಾಲಿಬಾಲ್ ಪಂದ್ಯಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಗೆದ್ದು ಬೀಗಿದೆ. ಕಂಠೀರವ ಸ್ಟೇಡಿಯಂ’ನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡದ ನಾಯಕ ಶಿಶಿರ್ ಜಯವಿಕ್ರಮ್ ಹಾಗೂ ಕೋಚ್ ಮನೋಜ್ ನೆಲ್ಯಾಡಿಯವರು ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ತಂಡವು ಚಿನ್ನದ ಪದಕ ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ನಡೆದ ಮಿನಿ ಒಲಿಂಪಿಕ್ ನ ಸಮಾರೋಪ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಗೃಹಸಚಿವರಾದ ಜಿ.ಪರಮೇಶ್ವರ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕರ್ನಾಟಕ ಒಲಿಂಪಿಕ್ ಪೆಡರೇಶನ್ ಅಧ್ಯಕ್ಷರಾದ ಡಾ.ಕೆ.ಗೋವಿಂದ ರಾಜ್ ಹಾಗೂ ಗಣ್ಯರು ಪ್ರಶಸ್ತಿ ನೀಡಿ ಶುಭ ಹಾರೈಸಿದರು.

