ಧರ್ಮಸ್ಥಳ ಪ್ರಕರಣದ ತನಿಖೆ ಪೂರ್ಣಗೊಳಿಸಲು ಎಸ್‌ಐಟಿ’ಗೆ ಕಾಲಮಿತಿ ವಿಧಿಸಿಲ್ಲ : ಪರಮೇಶ್ವರ್

ಚಿಕ್ಕಮಗಳೂರು, ಫೆ. 06 : ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ಕ್ಕೆ ತನಿಖೆ ಪೂರ್ಣಗೊಳಿಸಲು ಕಾಲಮಿತಿ ವಿಧಿಸಿಲ್ಲ. ಆದರೆ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಲು ತನಿಖೆಯ ಆರಂಭದಲ್ಲೇ ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

Advertisement

ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಅಂತಿಮ ವರದಿ ಇನ್ನೂ ಕೊಟ್ಟಿಲ್ಲ. ಅವರು ಎಲ್ಲೆಲ್ಲಿ ಸಾಕ್ಷಿ ಕಲೆ ಹಾಕಬೇಕಿತ್ತೋ ಅಲ್ಲಲ್ಲೇ ಹೋಗಿ ತನಿಖೆ ಮಾಡಿದ್ದಾರೆ. ಅವೆಲ್ಲವನ್ನು ಕ್ರೋಡೀಕರಿಸಿ ಶೀಘ್ರದಲ್ಲೇ ಅಂತಿಮ ವರದಿ ನೀಡುತ್ತಾರೆ. ಆಮೇಲೆ ವರದಿ ಬಹಿರಂಗಪಡಿಸುತ್ತೇವೆ ಎಂದು ಹೇಳಿದರು.

ಪ್ರಕರಣದ ತನಿಖೆ ಯಾವಾಗ ಪೂರ್ಣಗೊಳ್ಳಲಿದೆ ಎಂದು ಕಾಲದ ಮಿತಿ ಹೇಳಲಾಗದು. ಸ್ಯಾಟ್ ಲೈಟ್ ಲಾಂಚ್ ಮಾಡುವುದಾದರೆ ಕಾಲ ಮಿತಿ ಹೇಳಬಹುದು. ಇದು ಆಗಲ್ಲ. ಆದಷ್ಟು ಬೇಗ ತನಿಖೆ ತಂಡ ಅಂತಿಮ ಸಿದ್ಧಪಡಿಸಿ ಸರಕಾರದ ಮುಂದಿಡುತ್ತಾರೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಗೃಹಸಚಿವರು ಸ್ಪಷ್ಟಪಡಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.