ಬೆಂಗಳೂರು : ‘ಧರ್ಮಸ್ಥಳ ಪ್ರಕರಣ’ ತನಿಖೆ ಶೀಘ್ರ ಪೂರ್ಣಗೊಳಿಸುತ್ತೇವೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು, ಜ. 01 : ಈ ವರ್ಷ ಬಾಕಿ ಇರುವ ಎಸ್‌ಐಟಿ, ಸಿಐಡಿ ತನಿಖೆಗಳನ್ನು ಪೂರ್ಣಗೊಳಿಸುತ್ತೇವೆ. ಧರ್ಮಸ್ಥಳ ಪ್ರಕರಣ ಸೇರಿದಂತೆ ಯಾವುದೆಲ್ಲ ಬಾಕಿ ಪ್ರಕರಣ ಇವೆಯೋ ಈ ವರ್ಷ ಪೂರ್ಣಗೊಳಿಸುತ್ತೇವೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಈ ಬಗ್ಗೆ ಗುರುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

Advertisement

ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ

‘ಮನುಷ್ಯನಿಗೆ ಆಕಾಂಕ್ಷೆ ಎನ್ನುವುದು ಇರಲೇಬೇಕು, ಇಲ್ಲ ಅಂದರೆ ಮನುಷ್ಯ ಅನಿಸಿಕೊಳ್ಳಲ್ಲ. ಎಲ್ಲರಂತೆ ನನಗೂ ಆಕಾಂಕ್ಷೆ ಇದೆ. ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸೂಚ್ಯವಾಗಿ ಹೇಳಿದರು. ನಾನು ಇಲ್ಲಿಯವರೆಗೆ ಆಶಾವಾದಿಯಾಗಿಯೇ ಬದುಕಿದ್ದೇನೆ. ಜೀವನದಲ್ಲಿ ಏನೇನೋ ಆಗಬೇಕು ಎಂದು ಬಯಕೆ ಎಲ್ಲರಿಗೂ ಇರುತ್ತದೆ. ಮನುಷ್ಯನಿಗೆ ಆಕಾಂಕ್ಷೆ ಎಂಬುದು ಇರಲೇಬೇಕು. ಹೈಕಮಾಂಡ್ ತೀರ್ಮಾನ ಮಾಡಿದರೆ ಆಗುತ್ತದೆ. ಅದು ನಮ್ಮ ವರಿಷ್ಠರಿಗೆ ಬಿಟ್ಟದ್ದು ಎಂದು ತಿಳಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.