ಕುಂದಾಪುರ : ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ – ಡಾ. ಮಹೇಂದ್ರ ‌ಕುಮಾರ್ ಶೆಟ್ಟಿಯನ್ನು ಸರಕಾರಿ ಸೇವೆಯಿಂದ‌ ಅಮಾನತುಗೊಳಿಸಿ ಆದೇಶ !

Advertisement

ಕುಂದಾಪುರ, ಆ. 22 : ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರಿಗೆ ಹೋಟೆಲಿನಲ್ಲಿ ಶುಕ್ರವಾರ ಬೆಳಗ್ಗೆ ಏಕಾಏಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ‌ ನಿಂದಿಸಿ, ಕೊಲೆ‌ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಡಾ. ಮಹೇಂದ್ರ ‌ಕುಮಾರ್ ಶೆಟ್ಟಿಯನ್ನು ತಕ್ಷಣದಿಂದ ಸರಕಾರಿ ಸೇವೆಯಿಂದ‌ ಅಮಾನತುಗೊಳಿಸಿ ರಾಜ್ಯ ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಹಾಗೂ ಶಿಸ್ತು ‌ಪ್ರಾಧಿಕಾರಿ ಗುರುದತ್ ಹೆಗಡೆ ಆದೇಶಿಸಿದ್ದಾರೆ.

Advertisement

ಇವರು ಹಿಂದೆ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದು, ಪ್ರಸ್ತುತ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನ್ಯಪರ ಸೇವೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಆ.4 ರಿಂದ ಸೆ.30ರವರೆಗೆ ಒಟ್ಟು 58 ದಿನಗಳ ಕಾಲ ವೈದ್ಯಕೀಯ ಚಿಕಿತ್ಸೆಗಾಗಿ ರಜೆಯಲ್ಲಿದ್ದು, ಈ ಅವಧಿಯಲ್ಲಿ ಆ.21ರಂದು ಕುಂದಾಪುರದ ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಅವರು ಹೊಟೇಲ್‌ನಲ್ಲಿ ಇದ್ದ ಸಂದರ್ಭ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದರು. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮಾಹಿತಿ ನೀಡಿದ್ದರು.

Advertisement

ವೈದ್ಯರು ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಆದ್ದರಿಂದ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ, ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರ ವಿರುದ್ಧದ ಕರ್ತವ್ಯಲೋಪ ಮತ್ತು ಬೇಜವಾಬ್ದಾರಿತನದ ಆರೋಪಗಳ ಕುರಿತು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : “ಎಸ್ ಯಾಂಡ್ ವಿ ಫ್ಯಾಮಿಲಿ ಬ್ಯೂಟಿ ಸಲೂನ್ ಮತ್ತು ಅಕಾಡೆಮಿ” ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವ ಸನ್ಮಾನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಮರಿಯಮ್ಮ ಕಾಂಗ್ರೆಸ್ ಸೇರ್ಪಡೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಚಿಕ್ಕಮಗಳೂರು : ಟಿಪ್ಪು ಸುಲ್ತಾನ್ ಬೃಹತ್ ಕಟೌಟ್‌ಗೆ “ನಾವು ಪಾಕಿಸ್ತಾನಿ ಮುಜಾಹಿದ್‌ಗಳು…” ಹಾಡು ಬಳಸಿ ರೀಲ್ಸ್ – ಪ್ರಕರಣ ದಾಖಲು

⚠️ Contents are protected on this website.