ಭರತರಾಜ್ ಗಟ್ಟಿಯವರಿಗೆ ಗೌರವ ಡಾಕ್ಟರೇಟ್.

ಕಾಸರಗೋಡು : ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ಉಳಿಯತ್ತಡ್ಕದ ಭರತರಾಜ್ ಕೆ ಗಟ್ಟಿಯವರು ಗೌರವ ಡಾಕ್ಟರೇಟ್ ಗೆ ಆಯ್ಕೆಯಾಗಿದ್ದಾರೆ.

Advertisement

ನವದೆಹಲಿಯ ವರ್ಲ್ಡ್ ಕಲ್ಟರ್ ಆಂಡ್ ಎನ್ವಿರೊಲ್ಕೆಂಟ್ ಪ್ರೊಟೆಕ್ಷನ್ ಕಮಿಶನ್ ಸಂಸ್ಥೆಯು ಭರತರಾಜ್ ಅವರ ಸಮಾಜ ಸೇವೆ ಮತ್ತು ಆಡಳಿತ ನಿರ್ವಹಣೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ಈ ತಿಂಗಳ 14 ರಂದು ನವದೆಹಲಿಯಲ್ಲಿ ನಡೆಯಲಿರುವ ವಿಶೇಷ ಘಟಿಕೋತ್ಸವದಲ್ಲಿ ಈ ಪ್ರತಿಷ್ಟಿತ ಗೌರವ ಪ್ರದಾನವಾಗಲಿದೆ. ಭರತರಾಜ್ ಗಟ್ಟಿಯವರು ನಾಳೆ ಮದ್ಯಾಹ್ನ 12. 20 ಕ್ಕೆ ಮಂಗಳೂರಿನಿಂದ ಹೊರಡುವ ವಿಮಾನದಲ್ಲಿ ನವದೆಹಲಿಗೆ ಪ್ರಯಾಣಿಸಲಿದ್ದಾರೆ. ಮಧೂರು ಪಂಚಾಯತಿನ ಹೃದಯಸ್ಥಾನ ಉಳಿಯತ್ತಡ್ಕಕ್ಕೆ ಇದೇ ಮೊದಲ ಬಾರಿ ಗೌರವ ಡಾಕ್ಟರೇಟ್ ಒಲಿದು ಬರುತ್ತಿದ್ದು ಆ ಕಾರಣಕ್ಕಾಗಿ ಭರತ್ ಗಟ್ಟಿಯವರಿಗೆ ಅವರ ಆಪ್ತರು, ಅಭಿಮಾನಿಗಳು ವಿಶೇಷ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸದಾ ಸಕ್ರೀಯವಾಗಿರುವ ಇವರು ಕೋವಿಡ್ ಸಮಯದಲ್ಲೂ ಇವರು ಎಷ್ಟೋ ಜನರ ಬಾಳಿಗೆ ಬೆಳಕಾದವರು ಹಾಗೂ ಮಳೆಗಾಲದ ಸಮಯಲ್ಲಿ ಕೆಲವು ಕಡೆ ಮನೆಗಳು ಹಾನಿಗೊಳಗಾಗಿದ್ದು ತಕ್ಷಣ ಸ್ಪಂದಿಸಿದ ಇವರು ಮನೆಯನ್ನು ಪುನರ್ ನಿರ್ಮಾಣ ಮಾಡುವ ಮಹತ್ಕಾರ್ಯವನ್ನು ಮಾಡಿದ್ದಾರೆ. ಎಷ್ಟೇ ಎತ್ತರಕ್ಕೆ ಬೆಳೆದರೂ ಇಂದಿಗೂ ಭರತ್ ರಾಜ್ ರವರು ಸಾಮನ್ಯರಂತೆ ಎಲ್ಲರ ಜೊತೆಗೆ ನಿಲ್ಲುವ ವ್ಯಕ್ತಿತ್ವ ಅವರದ್ದು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.