ನವದೆಹಲಿ, ಜು. 25 : ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ತುರ್ತು ಬುಲಾವ್ ನೀಡಿದ್ದಾರೆ.
ಆರ್ಎಸ್ಎಸ್ ಹಿನ್ನೆಲೆಯ ನಾಯಕರೇ ಮುಂದಿನ ಶಿಕ್ಷಣ ಸಚಿವರನ್ನಾಗಿ ಮಾಡಲು ಪ್ಲ್ಯಾನ್ ನಡೆಯುತ್ತಿದೆ. ಮೊದಲಿನಿಂದಲೂ ಆರ್ಎಸ್ಎಸ್ (RSS) ಹಿನ್ನೆಲೆಯವರನ್ನೇ ಕೆಲವು ಖಾತೆಗಳಿಗೆ ಮಂತ್ರಿ ಮಾಡುವ ಪರಂಪರೆ ಬಿಜೆಪಿಯಲ್ಲಿದೆ. ಇದರಿಂದ ಆರೆಸೆಸ್ ಹಿನ್ನೆಲೆಯ ದೇವೇಂದ್ರ ಫಡ್ನವೀಸ್ ಹೆಸರು ಮುನ್ನೆಲೆಗೆ ಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನೆ ಸಂಸದ ಸಂಜಯ್ ರಾವತ್, ಧರ್ಮೇಂದ್ರ ಪ್ರಧಾನ್ ರಾಜೀನಾಮೆಯಿಂದ ತೆರವಾದ ಶಿಕ್ಷಣ ಸಚಿವ ಸ್ಥಾನಕ್ಕೆ ದೇವೆಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಬಹುದು ಎಂದು ಭಾವಿಸುತ್ತೇನೆ ಎಂದಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.


