ಮಣಿಪಾಲ : ಎರಡು ಗುಂಪುಗಳ ಮಧ್ಯೆ ಹೊಡೆದಾಟ – ಪ್ರಕರಣ ದಾಖಲು

Advertisement

ಉಡುಪಿ : ಮಣಿಪಾಲದ ಪಬ್ ಒಂದರ ಬಳಿ ಎರಡು ಗುಂಪುಗಳ ಮಧ್ಯೆ ತಡರಾತ್ರಿ ನಡೆದಿರುವ ಹೊಡೆದಾಟದ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕರ ಎರಡು ತಂಡಗಳು ನಡು ರಸ್ತೆ ಮಧ್ಯೆಯೇ ಹೊಡೆದಾಟ ನಡೆಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

Advertisement

ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರು ವಿಡಿಯೋ ಆಧರಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಎರಡೂ ತಂಡದ ಯುವಕರು ಸಂಬಂಧಿಕರಾಗಿದ್ದು ಯಾವುದೇ ಅಪರಾಧ ಹಿನ್ನೆಲೆ ಹೊಂದಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸಾರ್ವಜನಿಕ ಕಿರಿಕಿರಿ ಮತ್ತು ಗಲಾಟೆಗಾಗಿ ನಾವು ಎರಡೂ ಗುಂಪುಗಳ ಮೇಲೆ ಪ್ರಕರಣ ದಾಖಲಿಸುತ್ತಿದ್ದೇವೆ. ವ್ಯಕ್ತಿಗಳ ಇತ್ಯಾದಿ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Advertisement

ಆರೋಪಿತರುಗಳ ವಿರುದ್ದ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 203/2025 ಕಲಂ: 194(2) ಬಿ.ಎನ್‌.ಎಸ್‌ -2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಆರೋಪಿತರುಗಳಾದ ಅಮರ್‌ ಶೆಟ್ಟಿ, ಚಂದನ್‌ ಸಿ ಸಾಲ್ಯಾನ್‌, ಧನುಷ್‌, ಅಜಯ್‌ ಇವರುಗಳನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ