ಉಡುಪಿ : ಅಧಿಕ ಲಾಭಾಂಶದ ಆಮಿಷ – ಬರೋಬ್ಬರಿ 71.74 ಲಕ್ಷ ರೂ. ವಂಚನೆ

ಉಡುಪಿ, ಜ. 22 : ಷೇ‌ರ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ಪಡೆಯಬಹುದು ಎಂದು ಆಮಿಷವೊಡ್ಡಿ ಸಿಂಗಾಪುರದಲ್ಲಿ ಅಕೌಂಟೆಂಟ್ ಆಗಿರುವ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 71.74 ಲಕ್ಷ ರೂ.ಗಳನ್ನು ವಂಚಿಸಿರುವ ಪ್ರಕರಣವೊಂದು ಉಡುಪಿಯ ಸೈಬ‌ರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Advertisement

ಸಿಂಗಾಪುರದಲ್ಲಿ ಅಕೌಟೆಂಟ್ ಆಗಿರುವ ಮಹೇಶ್ ಶೆಟ್ಟಿಗಾರ್ ಎಂಬವರಿಗೆ ಜ.3ರಂದು ಒಮ್ಮಿಫಿಕ್ಸ್ ಪ್ರೊ ಎಂಬ ಹೆಸರಿನಲ್ಲಿ ವಾಟ್ಸಪ್ ಮೂಲಕ ಸಂದೇಶವೊಂದು ಬಂದಿದ್ದು, ಅದರಲ್ಲಿ ಷೇರ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿ ದರೆ ಅಧಿಕ ಲಾಭಾಂಶ ಕೊಡಿಸುವುದಾಗಿ ನಂಬಿಸಲಾಗಿತ್ತು. ಅದರಂತೆ ಮಹೇಶ್ ಅವರು ವಾಟ್ಸಪ್ ಬಳಕೆದಾರ ತಿಳಿಸಿದಂತೆ ಆತ ವಾಟ್ಸಾಪ್ ಮೂಲಕ ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಜ.4ರಿಂದ 18ರವರೆಗೆ ಒಟ್ಟು 71.74 ಲಕ್ಷ ರೂ. ಹಣವನ್ನು ಬ್ಯಾಂಕ್ ಆಫ್ ಇಂಡಿಯಾದ ಉಡುಪಿ ಶಾಖೆಯ ಖಾತೆಯ ಮೂಲಕ ಕಳುಹಿಸಿದ್ದರು.

ಆದರೆ ಈವರೆಗೆ ಹೂಡಿಕೆ ಮಾಡಿದ ಹಣವಾಗಲೀ, ಲಾಭಾಂಶವಾಗಲೀ ನೀಡದೇ ಮೋಸ ಮಾಡಿರುವುದಾಗಿ ಮಹೇಶ್ ಅವರ ಪತ್ನಿ ಯಶೋಧ ದೂರಿನಲ್ಲಿ ತಿಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.