ಪುತ್ತೂರು : ಗಂಡ ಹೆಂಡತಿಯ ಜಗಳ – ಪತ್ನಿಯ ಸಾವಿನಲ್ಲಿ ದುರಂತ ಅಂತ್ಯ – ಪತಿ ಸ್ಥಿತಿ ಗಂಭೀರ !

ಪುತ್ತೂರು, ಮಾ. 20 : ಗಂಡ ಹೆಂಡತಿಯ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವು ಪತ್ನಿಯ ಸಾವಿನಲ್ಲಿ ದುರಂತ ಅಂತ್ಯ ಕಂಡ ಘಟನೆ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಮಾರ್ಚ್ 20ರಂದು ಬೆಳಿಗ್ಗೆ ನಡೆದಿದೆ. ಪತ್ನಿಯನ್ನು ಹತ್ಯೆಗೈದ ಬಳಿಕ, ಪತಿ ಆತ್ಮಹತ್ಯೆಗೆ ಯತ್ನಿಸಿದ್ದು ಸದ್ಯ ಪರಿಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಗಂಡ ಹೆಂಡತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದಂತಹ ಜಗಳವು ತಾರಕಕ್ಕೇರಿ, ಹೆಂಡತಿಯನ್ನು ಗಂಡ ಹತ್ಯೆಗೈದಿದ್ದಾನೆ. ಹೆಂಡತಿಯನ್ನು ಹತ್ಯೆಗೈದ ಬಳಿಕ ಆತಂಕಗೊಂಡ ಗಂಡ ತಾನೂ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.