ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ – ಕಾಂಗ್ರೆಸ್ ಕಾಲೆಳೆದ ಜೆಡಿಎಸ್ !

ಬೆಂಗಳೂರು, ಜೂ​​ 11 : ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ಪಡೆಯಲು ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಕೆಲ ದಾಖಲೆಗಳು ಇನ್ನು ಅಗತ್ಯ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪ್ರಸ್ತುತ ರಾಜ್ಯದಲ್ಲಿ 1.30 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಇದರಲ್ಲಿ ಸುಮಾರು 1.48 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗೆ ಕಳೆದ ಐದು ತಿಂಗಳುಗಳಿಂದ ಹಣ ಸಂದಾಯವಾಗುತ್ತಿರುವ ಮಾಹಿತಿಯ ಆಧಾರದಲ್ಲಿ ಕೆಲ ನಿಯಮಗಳ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಈ ಸಂಬಂಧ ರಾಜ್ಯ ಸಕರ್ಕರದ ವಿರುದ್ಧ ಜೆಡಿಎಸ್​​ ವಾಗ್ದಾಳಿ ನಡೆಸಿದ್ದು, ವಚನಭ್ರಷ್ಟ ಕಾಂಗ್ರೆಸ್‌ನ ಗ್ಯಾರಂಟಿಗಳ ಅಸಲಿ ಬಣ್ಣ ಬಯಲಾಗಿದೆ ಎಂದು ಆರೋಪಿಸಿದೆ.

Advertisement

ಎಕ್ಸ್​​ ಪೋಸ್ಟ್​​ ಮೂಲಕ ಜೆಡಿಎಸ್​​ ಕಿಡಿ

ಚುನಾವಣೆಗೂ ಮುನ್ನ ಯೋಜನೆಗೆ ಯಾವ ಷರತ್ತೂ ಇರಲಿಲ್ಲ. ಪ್ರತಿ ಮನೆಯೊಡತಿಗೆ 2,000 ಎಂದು ರಾಜ್ಯದ ತಾಯಂದಿರ ಕಿವಿಗೆ ಹೂವಿಟ್ಟ ಕಾಂಗ್ರೆಸ್​​ ಸರ್ಕಾರ ಇದೀಗ 17 ಜಿಲ್ಲೆಗಳಲ್ಲಿ ಬರೋಬ್ಬರಿ 1.1 ಲಕ್ಷಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಕಿತ್ತುಹಾಕಿ ತನ್ನ ನೈಜ ಮುಖವನ್ನು ಬಹಿರಂಗಪಡಿಸಿದೆ. ಬಯೋಮೆಟ್ರಿಕ್, ಸರ್ವರ್ ಪ್ರಾಬ್ಲಮ್ ಎಂದು ಒಂದಿಲ್ಲೊಂದು ನೆಪ ಹೇಳಿ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಈ ‘ಕೈ’ ಸರ್ಕಾರದ ದ್ರೋಹವನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ ಎಂದು ಜೆಡಿಎಸ್​​ ಹೇಳಿದೆ.

‘ಇದು ಕೇವಲ ವೋಟ್ ಬ್ಯಾಂಕ್​​ಗಾಗಿ ಮಾಡಿದ ವಂಚನೆ’

ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಎಂದರೆ, ಗೃಹಲಕ್ಷ್ಮಿ ಕಡಿತದ ಬಗ್ಗೆ ಸಾಕ್ಷಾತ್ ಮುಖ್ಯಮಂತ್ರಿಗಳನ್ನೇ ಕೇಳಿದರೆ, ನನಗೆ ಗೊತ್ತಿಲ್ಲ ಎಂಬ ಬೇಜವಾಬ್ದಾರಿ ಉತ್ತರ ಕೊಡುತ್ತಾರೆ. ಹಾಗಾದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಯಾರು? ಸಿಎಂ ಅವರಿಗೆ ಗೊತ್ತಿಲ್ಲದೆ ಇಲಾಖೆಗಳಲ್ಲಿ ಇಷ್ಟೆಲ್ಲಾ ನಡೆಯುತ್ತಿದೆಯೇ ಅಥವಾ ಗೊತ್ತಿದ್ದೂ ನಾಟಕವಾಡುತ್ತಿದ್ದಾರೆಯೇ? 5,000 ಕೋಟಿ ರೂ. ಗೃಹಲಕ್ಷ್ಮಿ ಹಣವನ್ನು ತಿಂದು ತೇಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಮತಕ್ಕಾಗಿ ಮಹಿಳೆಯರನ್ನು ಯಾಮಾರಿಸಿ ಅಧಿಕಾರ ಸಿಕ್ಕ ಮೇಲೆ ಅವರನ್ನು ಅನರ್ಹರು ಎಂದು ಬೀದಿಗೆ ತಳ್ಳುವುದು ಯಾವ ರೀತಿಯ ಮಹಿಳಾ ಸಬಲೀಕರಣ? ಇದು ಕೇವಲ ವೋಟ್ ಬ್ಯಾಂಕ್​​ಗಾಗಿ ಮಾಡಿದ ವಂಚನೆಯಾಗಿದ್ದು, ಕಾಂಗ್ರೆಸ್ ಸರ್ಕಾರ ತಾಯಂದಿರ ಕ್ಷಮೆ ಕೇಳಬೇಕು. ಕೊಟ್ಟ ಮಾತಿಗೆ ತಪ್ಪಿದವರನ್ನು ಈ ನಾಡಿನ ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದು ಜೆಡಿಎಸ್​​ ವಾಗ್ದಾಳಿ ನಡೆಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.