ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠ ಪುತ್ತಿಗೆ ಮಠದ ವತಿಯಿಂದ ನಡೆದ ಲಕ್ಷ ಕಂಠ ಗೀತಾ ಪಾರಾಯಣ ಅದ್ದೂರಿ ಧಾರ್ಮಿಕ ಸಮಾರಂಭ ಹೊಸ ದಾಖಲೆ ನಿರ್ಮಿಸಿದ್ದು, ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿದೆ.


ಇಂದಿನ ಲಕ್ಷ ಕಂಠ ಗೀತಾ ಪಾರಾಯಣ ದೊಡ್ಡ ದಾಖಲೆ ಕಾರ್ಯಕ್ರಮ ದಾಖಲೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಭಗವದ್ಗೀತೆಯ 15ನೇ ಅಧ್ಯಾಯದ ಸಾಮೂಹಿಕ ಪಾರಾಯಣ ಮಾಡಲಾಗಿದೆ. ಈ ಕಾರ್ಯಕ್ರಮ ವಿಶ್ವ ದಾಖಲೆಯಾಗಿದೆ. ಇಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ಶ್ರೀಪಾದರಿಗೆ ಪ್ರಮಾಣ ಪತ್ರ ನೀಡುತ್ತಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಮಾಣ ಪತ್ರವನ್ನು ನೀಡುವುದಾಗಿ ಘೋಷಿಸಿದರು. ಪ್ರಧಾನಿ ಮೋದಿ, ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ನೂರಾರು ನೂರಾರು ಗಣ್ಯರು ಮಾತ್ರವಲ್ಲದೆ ನಾಡಿನ ವಿವಿಧೆಡೆಯಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದು ವಿಶೇಷವಾಗಿತ್ತು. ಸಮಾರಂಭ ಸ್ಥಳ ಸೇರಿ ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿತ್ತು.


