ಉಡುಪಿ : ಶ್ರೀ ಕೃಷ್ಣ ನಗರಿಯಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣ – ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆ

Advertisement

ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠ ಪುತ್ತಿಗೆ ಮಠದ ವತಿಯಿಂದ ನಡೆದ ಲಕ್ಷ ಕಂಠ ಗೀತಾ ಪಾರಾಯಣ ಅದ್ದೂರಿ ಧಾರ್ಮಿಕ ಸಮಾರಂಭ ಹೊಸ ದಾಖಲೆ ನಿರ್ಮಿಸಿದ್ದು, ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿದೆ.

Advertisement

ಇಂದಿನ ಲಕ್ಷ ಕಂಠ ಗೀತಾ ಪಾರಾಯಣ ದೊಡ್ಡ ದಾಖಲೆ ಕಾರ್ಯಕ್ರಮ ದಾಖಲೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಭಗವದ್ಗೀತೆಯ 15ನೇ ಅಧ್ಯಾಯದ ಸಾಮೂಹಿಕ ಪಾರಾಯಣ ಮಾಡಲಾಗಿದೆ. ಈ ಕಾರ್ಯಕ್ರಮ ವಿಶ್ವ ದಾಖಲೆಯಾಗಿದೆ. ಇಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ಶ್ರೀಪಾದರಿಗೆ ಪ್ರಮಾಣ ಪತ್ರ ನೀಡುತ್ತಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಮಾಣ ಪತ್ರವನ್ನು ನೀಡುವುದಾಗಿ ಘೋಷಿಸಿದರು. ಪ್ರಧಾನಿ ಮೋದಿ, ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ನೂರಾರು ನೂರಾರು ಗಣ್ಯರು ಮಾತ್ರವಲ್ಲದೆ ನಾಡಿನ ವಿವಿಧೆಡೆಯಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದು ವಿಶೇಷವಾಗಿತ್ತು. ಸಮಾರಂಭ ಸ್ಥಳ ಸೇರಿ ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿತ್ತು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ