ಮಂಗಳೂರು: ಗುರುಪುರದಲ್ಲಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು, ಏ. 09 : ಬುಧವಾರ ಸಂಜೆ ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿದ್ದ 30 ವರ್ಷದ ಕೌಶಿಕ್ ಬೆಲ್ಚಡ ಅವರ ಮೃತದೇಹವನ್ನು ಏಪ್ರಿಲ್ 9 ರ ಗುರುವಾರ ಮಧ್ಯಾಹ್ನ ಹೊರತೆಗೆಯಲಾಗಿದೆ.

ಕಜೆ ಪಡ್ಡಾಯಿಬೆಟ್ಟು ನಿವಾಸಿ ಕೌಶಿಕ್ ಬುಧವಾರ ಸಂಜೆ 6:30 ರ ಸುಮಾರಿಗೆ ತನ್ನ ಸ್ಕೂಟರ್‌ನಲ್ಲಿ ಸೇತುವೆಗೆ ಬಂದಿದ್ದರು. ಅವರು ನದಿಗೆ ಹಾರುವ ಮೊದಲು ಸೇತುವೆಯ ಮೇಲೆ ತಮ್ಮ ವಾಹನವನ್ನು ನಿಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಕತ್ತಲೆಯಾದ ಕಾರಣ, ಬುಧವಾರ ರಾತ್ರಿ ಪೂರ್ಣ ಪ್ರಮಾಣದ ಶೋಧ ಕಾರ್ಯಾಚರಣೆ ನಡೆಸಲು ಸಾಧ್ಯವಾಗಲಿಲ್ಲ.

ಗುರುವಾರ ಬೆಳಿಗ್ಗೆ, ಮಂಗಳೂರು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಪಾಣೆಮಂಗಳೂರಿನಿಂದ ಡೈವಿಂಗ್ ತಜ್ಞರು ಸಹ ಕಾರ್ಯಚರಣೆಯಲ್ಲಿ ಭಾಗಿಯಾದರು. ಸೇತುವೆಯ ಕಂಬಗಳ ಬಳಿ ಸಂಪೂರ್ಣ ಹುಡುಕಾಟದ ನಂತರ ಶವವನ್ನು ಪತ್ತೆಹಚ್ಚಿ ಹೊರತೆಗೆಯುವಲ್ಲಿ ಯಶಸ್ವಿಯಾದರು.

ಸೇತುವೆಯ ಮೇಲೆ ಪತ್ತೆಯಾದ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದ ಬಜ್ಪೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.