ಮಂಗಳೂರು: ಗುರುಪುರದಲ್ಲಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ

Advertisement

ಮಂಗಳೂರು, ಏ. 09 : ಬುಧವಾರ ಸಂಜೆ ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿದ್ದ 30 ವರ್ಷದ ಕೌಶಿಕ್ ಬೆಲ್ಚಡ ಅವರ ಮೃತದೇಹವನ್ನು ಏಪ್ರಿಲ್ 9 ರ ಗುರುವಾರ ಮಧ್ಯಾಹ್ನ ಹೊರತೆಗೆಯಲಾಗಿದೆ.

ಕಜೆ ಪಡ್ಡಾಯಿಬೆಟ್ಟು ನಿವಾಸಿ ಕೌಶಿಕ್ ಬುಧವಾರ ಸಂಜೆ 6:30 ರ ಸುಮಾರಿಗೆ ತನ್ನ ಸ್ಕೂಟರ್‌ನಲ್ಲಿ ಸೇತುವೆಗೆ ಬಂದಿದ್ದರು. ಅವರು ನದಿಗೆ ಹಾರುವ ಮೊದಲು ಸೇತುವೆಯ ಮೇಲೆ ತಮ್ಮ ವಾಹನವನ್ನು ನಿಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಕತ್ತಲೆಯಾದ ಕಾರಣ, ಬುಧವಾರ ರಾತ್ರಿ ಪೂರ್ಣ ಪ್ರಮಾಣದ ಶೋಧ ಕಾರ್ಯಾಚರಣೆ ನಡೆಸಲು ಸಾಧ್ಯವಾಗಲಿಲ್ಲ.

ಗುರುವಾರ ಬೆಳಿಗ್ಗೆ, ಮಂಗಳೂರು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಪಾಣೆಮಂಗಳೂರಿನಿಂದ ಡೈವಿಂಗ್ ತಜ್ಞರು ಸಹ ಕಾರ್ಯಚರಣೆಯಲ್ಲಿ ಭಾಗಿಯಾದರು. ಸೇತುವೆಯ ಕಂಬಗಳ ಬಳಿ ಸಂಪೂರ್ಣ ಹುಡುಕಾಟದ ನಂತರ ಶವವನ್ನು ಪತ್ತೆಹಚ್ಚಿ ಹೊರತೆಗೆಯುವಲ್ಲಿ ಯಶಸ್ವಿಯಾದರು.

ಸೇತುವೆಯ ಮೇಲೆ ಪತ್ತೆಯಾದ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದ ಬಜ್ಪೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ