ಬೈಂದೂರು : ಶಿಕ್ಷಕಿ ಕಾಲಿಗೆರಗಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ – ಶಾಸಕರ ಕಾಳಜಿಗೆ ಕಣ್ಣೀರಾದ ಟೀಚರ್

ಬೈಂದೂರು, ಏ. 27 : ಇಲ್ಲಿನ ಶಿರೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶದ ರೂವಾರಿ ಎನ್ನಲಾದ ಪ್ರಾಂಶುಪಾಲೆ ಜಯಂತಿ ಅವರ ಕಾಲಿಗೆರಗಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಗೌರವಿಸಿದರು.

ಕಳೆದ ವರ್ಷ ಶೇ.35ರಷ್ಟು ಫಲಿತಾಂಶವಿದ್ದ ಶಾಲೆ ಈ ಬಾರಿ ಶೇ. 94ರಷ್ಟು ಫಲಿತಾಂಶ ಗಳಿಸಿದೆ. ಕಳೆದ ವರ್ಷ ಶಾಸಕಗುರುರಾಜ್‌ ಗಂಟಿಹೊಳೆ ಪ್ರಾಂಶುಪಾಲರನ್ನು ಹಾಗೂ ಶಿಕ್ಷಕರನ್ನು ಕಟು ಮಾತುಗಳಿಂದ ತರಾಟೆಗೆ ತೆಗೆದುಕೊಂಡಿದ್ದರು.

ಶನಿವಾರ ಶಾಲೆಗೆ ಭೇಟಿ ನೀಡಿದ ಶಾಸಕರು ಭಾವುಕರಾಗಿ ಶಿರಬಾಗಿದರು. ಇದನ್ನು ಕಂಡು ಅಲ್ಲಿದ್ದವರ ಕಣ್ಣಾಲಿಗಳು ಒದ್ದೆಯಾದವು. ಸೋತಾಗ ಎಚ್ಚರಿಸುವ ಕೆಲಸ ಆಗಬೇಕು. ಬದಲಾವಣೆಯ ಉದ್ದೇಶದಿಂದಲೇ ಕಳೆದ ಬಾರಿ ಟೀಕೆ ಮಾಡಿದ್ದೆ. ಜಯಂತಿ ಟೀಚರ್ ಮತ್ತು ತಂಡದವರು ಆ ಸವಾಲನ್ನು ಗೆದ್ದಿದ್ದಾರೆ’ ಎಂದು ಶಾಸಕರು ಹೇಳಿದರು. ಶಾಸಕರ ಕಾಳಜಿಗೆ ಜಯಂತಿ ಟೀಚರ್ ಕೂಡ ಕಣ್ಣೀರಾದರು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.