ಬೈಂದೂರು : ಶಿಕ್ಷಕಿ ಕಾಲಿಗೆರಗಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ – ಶಾಸಕರ ಕಾಳಜಿಗೆ ಕಣ್ಣೀರಾದ ಟೀಚರ್

ಬೈಂದೂರು, ಏ. 27 : ಇಲ್ಲಿನ ಶಿರೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶದ ರೂವಾರಿ ಎನ್ನಲಾದ ಪ್ರಾಂಶುಪಾಲೆ ಜಯಂತಿ ಅವರ ಕಾಲಿಗೆರಗಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಗೌರವಿಸಿದರು.

ಕಳೆದ ವರ್ಷ ಶೇ.35ರಷ್ಟು ಫಲಿತಾಂಶವಿದ್ದ ಶಾಲೆ ಈ ಬಾರಿ ಶೇ. 94ರಷ್ಟು ಫಲಿತಾಂಶ ಗಳಿಸಿದೆ. ಕಳೆದ ವರ್ಷ ಶಾಸಕಗುರುರಾಜ್‌ ಗಂಟಿಹೊಳೆ ಪ್ರಾಂಶುಪಾಲರನ್ನು ಹಾಗೂ ಶಿಕ್ಷಕರನ್ನು ಕಟು ಮಾತುಗಳಿಂದ ತರಾಟೆಗೆ ತೆಗೆದುಕೊಂಡಿದ್ದರು.

ಶನಿವಾರ ಶಾಲೆಗೆ ಭೇಟಿ ನೀಡಿದ ಶಾಸಕರು ಭಾವುಕರಾಗಿ ಶಿರಬಾಗಿದರು. ಇದನ್ನು ಕಂಡು ಅಲ್ಲಿದ್ದವರ ಕಣ್ಣಾಲಿಗಳು ಒದ್ದೆಯಾದವು. ಸೋತಾಗ ಎಚ್ಚರಿಸುವ ಕೆಲಸ ಆಗಬೇಕು. ಬದಲಾವಣೆಯ ಉದ್ದೇಶದಿಂದಲೇ ಕಳೆದ ಬಾರಿ ಟೀಕೆ ಮಾಡಿದ್ದೆ. ಜಯಂತಿ ಟೀಚರ್ ಮತ್ತು ತಂಡದವರು ಆ ಸವಾಲನ್ನು ಗೆದ್ದಿದ್ದಾರೆ’ ಎಂದು ಶಾಸಕರು ಹೇಳಿದರು. ಶಾಸಕರ ಕಾಳಜಿಗೆ ಜಯಂತಿ ಟೀಚರ್ ಕೂಡ ಕಣ್ಣೀರಾದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.