ಬೆಳ್ತಂಗಡಿ, ಜೂನ್ 25 : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಮತ್ತು ಮದ್ಯ ಕರ್ನಾಟಕ ವಿಭಾಗದ ಉತ್ತಮ ಶಾಸಕ ಪ್ರಶಸ್ತಿಯನ್ನು ಶಾಸಕ ಹರೀಶ್ ಪೂಂಜ ಸಚಿವ ಕೃಷ್ಣಬೈರೇ ಗೌಡರಿಂದ ಸ್ವೀಕರಿಸಿದರು.
ಬೆಳ್ತಂಗಡಿ ಶಾಸಕರ ನಾಯಕತ್ವ ಹಾಗೂ ಅಭಿವೃದ್ಧಿ ಮತ್ತು ಜನಪರ ಆಡಳಿತ ಹೀಗೆ ಎಲ್ಲಾ ರೀತಿಯ ಅವಲೋಕನ ಮತ್ತು ಜನಾಭಿಪ್ರಾಯಗಳನ್ನು ಸಂಗ್ರಹಿಸಿ ಈ ಪ್ರಶಸ್ತಿಯನ್ನು ಕೊಡಮಾಡಲಾಗಿದೆ ಎಂದು ಪ್ರಶಸ್ತಿ ಆಯೋಜಕರು ಮಾಹಿತಿ ನೀಡಿದ್ದಾರೆ.
ಇನ್ನು, ಶಾಸಕ ಹರೀಶ್ ಪೂಂಜಾ ಅವರಿಗೆ “ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025ರ ಪ್ರಶಸ್ತಿ” ಲಭಿಸಿದ್ದಕ್ಕೆ ಅವರ ಅಭಿಮಾನಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.


