ಪಡುಬಿದ್ರೆ : ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿನ್ನದ ಸರ ಕಳವು ಪ್ರಕರಣ – ತಮಿಳುನಾಡು ಮೂಲದ ಮೂವರು ಕಳ್ಳಿಯರ ಬಂಧನ

ಪಡುಬಿದ್ರೆ, ಡಿ. 27 : ಹೆಜಮಾಡಿಯ ಶ್ರೀಬ್ರಹ್ಮಬೈದರ್ಕಳ ಗರಡಿಯಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಸರವನ್ನು ಎಗರಿಸಿದ ತಮಿಳುನಾಡು ಮೂಲದ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ. ಶೀಥಲ್, ಕಾಳಿಯಮ್ಮ ಮತ್ತು ಮಾರಿ (40) ಬಂಧಿತ ಆರೋಪಿಗಳು.

Advertisement

ಗರಡಿಯಲ್ಲಿ ನೇಮೋತ್ಸವ ನಡೆಯುತ್ತಿದ್ದ ಸಂದರ್ಭ ಮೂವರು ಕಳ್ಳಿಯರು ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಜನಸಂದಣಿಯ ಮಧ್ಯೆಯೇ ಎಗರಿಸಿದ್ದರು. ಈ ಕುರಿತ ವೀಡಿಯೊ ವೈರಲ್ ಆಗಿದ್ದು ಕಳ್ಳಿಯರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಇದೀಗ ತಮಿಳುನಾಡು ಮೂಲದ ಮೂವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಹಳ ಚಾಣಾಕ್ಷತನದಿಂದ ಚಿನ್ನದ ಸರ ಎಗರಿಸುವ ವೀಡಿಯೋ ಅಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದೇ ದೃಶ್ಯಾವಳಿಗಳನ್ನು ಸಾಕ್ಷಿಗಳನ್ನಾಗಿಟ್ಟುಕೊಂಡು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.

ಪಡುಬಿದ್ರೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

⚠️ Contents are protected on this website.