ಢಾಕಾ : ಹಿಂಸಾಚಾರ ಪೀಡಿತ ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತರು ಹಾಗೂ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯಗಳು ಮುಂದುವರಿದಿದ್ದು, ಇದೀಗ ಕಿಡಿಗೇಡಿಗಳು ಹಿಂದೂ ಶಿಕ್ಷಕನ ಮನೆಗೆ ಬೆಂಕಿ ಹಚ್ಚಿದ್ದಾರೆ. ಸಿಲೆಂಟ್ನ ಗೋವೈನ್ ಫಾಟ್ ಉಪ ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ ಇಸ್ಲಾಮಿಕ್ ಗುಂಪೊಂದು ಬೀರೇಂದ್ರ ಕುಮಾರ್ ದೇವ್ ಎಂಬ ಶಾಲಾ ಶಿಕ್ಷಕನ ಮನೆಗೆ ಬೆಂಕಿ ಹಚ್ಚಿದ್ದು, ಸುಟ್ಟು ಕರಕಲಾಗಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಮನೆಯ ತುಂಬಾ ಬೆಂಕಿ ಆವರಿಸಿಕೊಂಡಿದ್ದು, ಈ ವೇಳೆ ಮನೆಯಲ್ಲಿ ಇರುವ ಕುಟುಂಬದ ಸದಸ್ಯರು ಹೊರ ಬರಲು ಪ್ರಯತ್ನಿಸುತ್ತಿದ್ದ ವೇಳೆ ಅಗ್ನಿಯ ಕೆನ್ನಾಲಿಗೆ ಇನ್ನಷ್ಟು ಹೆಚ್ಚಾಗಿದೆ. ಇದರಿಂದ ಹೊರ ಬಾರಲು ಸಾಧ್ಯವಾಗದೇ ಪರದಾಡಿದ್ದಾರೆ. ಈ ದೃಶ್ಯವನ್ನು ಪ್ರತ್ಯಕ್ಷವಾಗಿ ಕಂಡ ಅಕ್ಕ ಪಕ್ಕದಲ್ಲಿರುವ ಅಲ್ಪ ಸಂಖ್ಯಾತರು ಭಯಭೀತರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ. ಕಳೆದ ಒಂದು ತಿಂಗಳಿನಿಂದ 7 ಮಂದಿ ಹಿಂದೂಗಳ ಹತ್ಯೆ ನಡೆದಿದೆ.

