ಮಂಗಳೂರು, ಜು. 24 : ಬಿ.ಸಿ.ರೋಡು ಬಸ್ ನಿಲ್ದಾಣದಲ್ಲಿ ಹಾಡಹಗಲೇ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು, ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಚೇತನ್ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಐಸಿಯುನಲ್ಲಿ ವೈದ್ಯರ ನಿಗಾದಲ್ಲಿದ್ದ ಚೇತನ್ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದಂತೆ ಸದ್ಯ ಆತನನ್ನು ಐಸಿಯುನಿಂದ ಸಾಮಾನ್ಯ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆದರೆ, ಈ ಬಗ್ಗೆ ಅಧೀಕೃತ ವರದಿ ಇನ್ನೂ ಲಭ್ಯವಾಗಿಲ್ಲ.
ಕಳೆದ 06ದಿನಗಳಿಂದ ಚೇತನ್ ವೆನ್ಲಾಸ್ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು, ಡಿಸ್ಚಾರ್ಜ್ ಆದ ತಕ್ಷಣ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.


