ಬೆಂಗಳೂರು : ನೇಪಾಳ ಪ್ರವಾಹದಲ್ಲಿ ಇನ್ಫೋಸಿಸ್ ಸಿಇಓ ನಾಪತ್ತೆ

Advertisement

ಬೆಂಗಳೂರು, ಆ. 31 : ನೇಪಾಳದಲ್ಲಿ ಸಂಭವಿಸಿದ ಭೀಕರ ದಿಢೀರ್ ಪ್ರವಾಹದ ಬಳಿಕ, ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ನ ಮುಖ‍್ಯಸ್ಥ ಲ್ಯಾಕ್ಸ್ ಗೋಪಿ ಸೆಟ್ಟಿ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮಾಹಿತಿ ತಂತ್ರಜ್ಞಾನ ಸೇವಾ ಸಂಸ್ಥೆ ಇನ್ಫೋಸಿಸ್ ತಿಳಿಸಿದೆ ಎಂದು ವರದಿಯಾಗಿದೆ.

ಇನ್ಫೋಸಿಸ್ ನ ಅಂಗಸಂಸ್ಥೆಯಾದ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್, ಮುಖ್ಯವಾಗಿ ಅಮೆರಿಕ ಮತ್ತು ಕೆನಡಾದ ಸಾರ್ವಜನಿಕ ವಲಯಕ್ಕೆ ಸೇವೆಗಳನ್ನು ಒದಗಿಸುತ್ತಿದೆ.
ಗೋಪಿ ಸೆಟ್ಟಿ ಅವರು ತಮ್ಮ ವೈಯಕ್ತಿಕ ಪ್ರವಾಸದ ಭಾಗವಾಗಿ ನೇಪಾಳಕ್ಕೆ ಭೇಟಿ ನೀಡಿದ್ದರು. ಸದ್ಯ ಅವರ ಕ್ಷೇಮ ಮತ್ತು ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಇನ್ಫೋಸಿಸ್ ತನ್ನ ಹೇಳಿಕೆಯಲ್ಲಿ ಹೇಳಿದೆ.

ಗೋಪಿ ಸೆಟ್ಟಿಯೊಂದಿಗೆ ಸಂಪರ್ಕ ಸಾಧಿಸಲು ಹಾಗೂ ಅವರ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲು ಸಂಬಂಧಿತ ಪ್ರಾಧಿಕಾರಗಳೊಂದಿಗೆ ಕಂಪನಿ ನಿಕಟವಾಗಿ ವ್ಯವಹರಿಸುತ್ತಿದೆ ಎಂದು ಅದು ತಿಳಿಸಿದೆ.

ನಾವು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲ ನೆರವನ್ನೂ ಒದಗಿಸುತ್ತಿದ್ದೇವೆ. ಗೋಪಿ ಸೆಟ್ಟಿ ಹಾಗೂ ಈ ದುರಂತದಿಂದ ಬಾಧಿತರಾದ ಎಲ್ಲರಿಗೂ ನಮ್ಮ ಸಂತಾಪಗಳು ಎಂದು ಇನ್ಫೋಸಿಸ್ ಹೇಳಿದೆ.
ಈ ದುರಂತದಲ್ಲಿ ಆಗಿರುವ ಜೀವಹಾನಿಗೂ ಇನ್ಫೋಸಿಸ್ ಸಂತಾಪ ವ್ಯಕ್ತಪಡಿಸಿದೆ.

ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ದಿಢೀರ್ ಪ್ರವಾಹದ ಬಳಿಕ ಕನಿಷ್ಠ 320 ಭಾರತೀಯರು ನಾಪತ್ತೆಯಾಗಿದ್ದಾರೆ ಹಾಗೂ ಚೀನಾ ಭಾಗದಲ್ಲಿ 400ಕ್ಕೂ ಹೆಚ್ಚು ಮಂದಿ ಸಿಲುಕಿಕೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಪರಿಸ್ಥಿತಿಯನ್ನು ಎದುರಿಸಲು ಭಾರತ ಅಗತ್ಯವಿರುವ ಎಲ್ಲ ನೆರವನ್ನು ನೀಡಲೂ ಸಿದ್ಧವಿದೆ ಎಂದು ತಿಳಿಸಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ