ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದ ಕಾರು : ಇಬ್ಬರು ಸ್ಥಳದಲ್ಲೇ ಸಾವು

ಬಿ.ಸಿ.ರೋಡ್ : ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5:00 ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ ಹೊಡೆದಿದೆ.

Advertisement

ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ, ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.