ಜೈಪುರ : ಮಸೀದಿಯ ಅತಿಕ್ರಮಣ ತೆರವು ಕಾರ್ಯಾಚರಣೆ – ಕಲ್ಲು ತೂರಾಟ ನಡೆಸಿದ ಗುಂಪು

ಜೈಪುರ, ಡಿ. 26 : ಮಸೀದಿಯ ಹೊರಗೆ ಶುಕ್ರವಾರ ಬೆಳಗ್ಗೆ ರಸ್ತೆಯ ಉದ್ದಕ್ಕೂ ನಿರ್ಮಿಸಲಾದ ಕಬ್ಬಿಣದ ಬೇಲಿಗಳನ್ನು ತೆಗೆದುಹಾಕುತ್ತಿದ್ದಾಗ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಜೈಪುರದಿಂದ 40 ಕಿಲೋಮೀಟರ್ ದೂರದಲ್ಲಿರುವ ಜೋಮು ಪಟ್ಟಣದ ಬಸ್ ನಿಲ್ದಾಣ ಪ್ರದೇಶದಲ್ಲಿ ಬಳಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆನ್ನಲಾಗಿದೆ.

Advertisement

ರಸ್ತೆಗೆ ಅತಿಕ್ರಮಣ ಮಾಡಿದ ಕಬ್ಬಿಣದ ಬೇಲಿಗಳನ್ನು ಪೊಲೀಸರು ತೆಗೆದುಹಾಕಲು ಪ್ರಯತ್ನಿಸಿದಾಗ ಉದ್ವಿಗ್ನತೆ ಉಂಟಾಗಿದೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಮತ್ತು ಬಲಪ್ರಯೋಗವನ್ನು ಮಾಡಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪೊಲೀಸರ ಪ್ರಕಾರ, ಗುರುವಾರ ಸಂಜೆ ಮಸೀದಿಯ ಹೊರಗಿನ ರಸ್ತೆ ಪ್ರದೇಶದಲ್ಲಿ ಅತಿಕ್ರಮಣ ತೆರವು ಮಾಡುವ ಕುರಿತು ಆಡಳಿತ ಮತ್ತು ಸಮುದಾಯದ ಸದಸ್ಯರ ನಡುವೆ ಮಾತುಕತೆ ನಡೆಸಲಾಗಿತ್ತು. ಸಮುದಾಯದ ಸದಸ್ಯರು ಅವುಗಳನ್ನು ತಾವಾಗಿಯೇ ತೆಗೆದುಹಾಕಲು ಒಪ್ಪಿಕೊಂಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.