ಅಕ್ರಮವಾಗಿ ಜಾನುವಾರು ವಧೆ : ಇಬ್ಬರು ಆರೋಪಿಗಳ ಬಂಧನ..

ಬಂಟ್ವಾಳ, ಮೇ 28 : ಅಕ್ರಮವಾಗಿ ಜಾನುವಾರು ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳ ಸಹಿತ ಜಾನುವಾರು, ವಾಹನ ಸೇರಿದಂತೆ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಮೇ.27ರಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಮುಸ್ತಾಫಾ (33) ಹಾಗೂ ಮಹಮ್ಮದ್ ಸಾದೀಕ್ (30) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ತಾಲೂಕಿನ ಸಜಿಪಮೂಡ ಗ್ರಾಮದ ಪಂಜಾಜೆ-ಕೊಳಕೆ ಪ್ರದೇಶದಲ್ಲಿರುವ ಮನೆಯ ಹಿಂಭಾಗದ ದನದ ಕೊಟ್ಟಿಗೆಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕರ ನೇತೃತ್ವದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಲಾಯಿತು.

ದಾಳಿ ವೇಳೆ ಆರೋಪಿಗಳಾದ ಜಾಪರ್ ಹಾಗೂ ಅಸ್ಪಾಕ್ ಪರಾರಿಯಾಗಿದ್ದು, ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇಬ್ಬರನ್ನು ಸಿಬ್ಬಂದಿಗಳ ಸಹಾಯದಿಂದ ವಶಕ್ಕೆ ಪಡೆಯಲಾಗಿದೆ.

ಸ್ಥಳ ಪರಿಶೀಲನೆಯ ವೇಳೆ ಐದು ಜಾನುವಾರುಗಳು, ಒಂದು ಕರು, ಸುಮಾರು 31 ಕೆ.ಜಿ ಪ್ಯಾಕೇಟ್ ಮಾಂಸ, ಸುಮಾರು 40 ಕೆ.ಜಿ ಮಾಂಸ, ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ಮಾರುತಿ ಸುಜುಕಿ ಇಕೋ ಕಾರು, ಮಾಂಸ ಕತ್ತರಿಸುವ ಉಪಕರಣಗಳು ಸೇರಿದಂತೆ ವಿವಿಧ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಘಟನೆಯ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 68/2026 ಕಲಂ 4, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರಡಿ ಪ್ರಕರಣ ದಾಖಲಿಸಲಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.