ಚಿಕ್ಕಮಗಳೂರು : ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳಿದ್ದ ಜೀಪ್ ಪಲ್ಟಿಯಾಗಿ ಆರು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು, ಡಿ. 22 : ಶಾಲಾ ಮಕ್ಕಳಿದ್ದ ಜೀಪ್ ಪಲ್ಟಿಯಾಗಿ ಆರು ವಿದ್ಯಾರ್ಥಿಗಳು ಗಾಯಗೊಂಡ ಮುಳ್ಳಯ್ಯನಗಿರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

Advertisement

ಕೇರಳ ಮೂಲದ ಶಾಲೆಯೊಂದರ ವಿದ್ಯಾರ್ಥಿಗಳು ಚಿಕ್ಕಮಗಳೂರಿನ ಪ್ರವಾಸಿ ತಾಣವಾದ ಮುಳ್ಳಯ್ಯನ ಗಿರಿಗೆ ಪ್ರವಾಸಕ್ಕೆ ಬಂದಿದ್ದರು. ಮುಳ್ಳಯ್ಯನಗಿರಿಗೆ ದೊಡ್ಡ ಬಸ್ ಗಳ ಪ್ರವೇಶ ಕಠಿಣವಾಗಿರುವುದರಿಂದ, ಬಸ್ ನಿಲ್ಲಿಸಿ ವಿದ್ಯಾರ್ಥಿಗಳನ್ನು ಜೀಪ್ ಮೂಲಕ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಇದರಿಂದ ಆರು ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಇನ್ನು, ಅಪಘಾತಕ್ಕೆ ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಕಾರಣ ಎನ್ನಲಾಗುತ್ತಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಗಾಬರಿಗೊಂಡ ಜೀಪ್ ಚಾಲಕ ಜೀಪನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳೀಯರು ಗಾಯಾಳು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

ರಾಜ್ಯ / ದೇಶ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

ಕ್ರೀಡೆ, ತಾಲೂಕು, ಬೆಳ್ತಂಗಡಿ

ಬಂಗಾಡಿ : ಯುವ ಸಂಗಮ ಸೇವಾ ಸಮಿತಿ ಬೆಳ್ತಂಗಡಿ ವತಿಯಿಂದ “ಯುವ ಸಂಗಮ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾಟ

⚠️ Contents are protected on this website.