ಕಾರ್ಕಳ : ಬಜಗೋಳಿ ಸೊಸೈಟಿಗೆ ನುಗ್ಗಿ ಕಳವು ಯತ್ನ – ಆರೋಪಿಯ ಬಂಧನ

ಕಾರ್ಕಳ, ಜ.18 : ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ನುಗ್ಗಿ ಕಳವಿಗೆ ಯತ್ನಿಸಿದ್ದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ನಿಟ್ಟೆ ದರ್ಖಾಸು ನಿವಾಸಿ ಸುರೇಶ ಕೊರಗ ಪೂಜಾರಿ(53) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಜ.16ರಂದು ಸೊಸೈಟಿ ಬೀಗ ಮುರಿದು ಒಳಗೆ ನುಗ್ಗೆ ಕಳ್ಳತನಕ್ಕೆ ಪ್ರಯತ್ನಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಪರಿಶೀಲಿಸಿದಾಗ ಕಳ್ಳತನಕ್ಕೆ ಪ್ರಯತ್ನಿಸಿದ ವ್ಯಕ್ತಿ ಗುರುತು ಪತ್ತೆಯಾಗಿತ್ತು.

ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಜ.17ರಂದು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ಮೇಲೆ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಪಡುಬಿದ್ರೆ, ಬೆಳ್ತಂಗಡಿ, ಉಡುಪಿ ನಗರ, ಗೋವಾ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.