ಬಂಟ್ವಾಳ : ಬಸ್ ನಲ್ಲಿ ಬ್ಯಾಗ್‌ನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು – ಸೊತ್ತು ಸಹಿತ ಆರೋಪಿಯ ಬಂಧನ

ಬಂಟ್ವಾಳ, ಮಾ. 10 : ಸುಮಾರು ಐದು ತಿಂಗಳ ಹಿಂದೆ ಬಸ್ ನಲ್ಲಿ ಬ್ಯಾಗ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಬಂಧಿಸಿ, ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಘಟನೆಯ ಹಿನ್ನೆಲೆ

2025ರ ನವೆಂಬರ್ 19ರಂದು ಬ್ರಹ್ಮಾವರ ಮೂಲದ ದಂಪತಿಗಳು ದುರ್ಗಾಂಬಾ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿರುವ ‘ಸಮುದ್ರ ಹೋಟೆಲ್’ ಬಳಿ ಬಸ್ ನಿಂತಿದ್ದ ಸಂದರ್ಭದಲ್ಲಿ, ದಂಪತಿಗಳ ಬ್ಯಾಗ್‌ನಲ್ಲಿದ್ದ 180 ಗ್ರಾಂ ತೂಕದ (ಅಂದಾಜು 20 ಲಕ್ಷ ರೂ. ಮೌಲ್ಯದ) ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯ ಬಂಧನ

ಪೊಲೀಸರು ತನಿಖೆ ಚುರುಕುಗೊಳಿಸಿ, ಕೃತ್ಯ ಎಸಗಿದ ಮಧ್ಯಪ್ರದೇಶ ನಿವಾಸಿ ಸಮದ್ ಖಾನ್ (37) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಕಳವು ಮಾಡಲಾದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪೊಲೀಸ್ ತಂಡದ ಕಾರ್ಯಾಚರಣೆ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಎ.ಎಸ್.ಪಿ ಯಶ್ ಕುಮಾರ್ ಶರ್ಮಾ ನಿರ್ದೇಶನದಂತೆ, ತನಿಖಾಧಿಕಾರಿ ಹಾಗೂ ಬಂಟ್ವಾಳ ನಗರ ಇನ್ಸ್‌ಪೆಕ್ಟರ್ ಆನಂತ ಪದ್ಮನಾಭ ನೇತೃತ್ವದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವಿಜಯ್ ಕುಮಾರ್, ಸುರೇಶ್ ಕುಮಾರ್, ರಾಜೇಶ್, ಇರ್ಷಾದ್ ಪಿ, ಬಸವರಾಜ್, ವಿಜಯ್ ಕುಮಾರ್, ಮಪಿಸಿ ರೇವತಿ ಹಾಗೂ ಜಿಲ್ಲಾ ಪೊಲೀಸ್ ಘಟಕದ ಗಣಕಯಂತ್ರ ಘಟಕದ ಸಂಪತ್ ಕುಮಾರ್ ಮತ್ತು ದಿವಾಕರ್ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.