ಕನ್ಯಾಡಿ, ಜೂ. 30 : ಧರ್ಮಸ್ಥಳ ಗ್ರಾಮದ ಕನ್ಯಾಡಿ ಮಸೀದಿ ಬಳಿ ಜೂ.30ರಂದು ರಾತ್ರಿ ಮಳೆ ಸುರಿಯುತ್ತಿದ್ದ ವೇಳೆ ಪಾದಾಚಾರಿಯೊಬ್ಬರಿಗೆ ಗ್ರಾಮಾಂತರ ಸರ್ಕಾರಿ ಬಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಸರ್ಕಾರಿ ಬಸ್ ಅಪಘಾತದಲ್ಲಿ ಪಾದಾಚಾರಿ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ಸ್ಥಳದಲ್ಲಿ ರಕ್ತ ಹರಿದಿರುವುದು ಕಂಡುಬಂದಿದೆ.
ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ವೇಳೆ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆ ಒದ್ದೆಯಾಗಿತ್ತು. ಮಳೆಯಿಂದಾಗಿ ವಾಹನ ಚಾಲಕರಿಗೆ ರಸ್ತೆ ಸರಿಯಾಗಿ ಕಾಣಿಸದೇ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.


