ಕಾಪು : ಕೌನ್ಸಿಲಿಂಗ್ ನೆಪದಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪ- ಆರೋಪಿಯ ಬಂಧನ

ಕಾಪು : ಕೌನ್ಸಿಲಿಂಗ್ ನೆಪದಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ಆರೋಪದಡಿ ಕಾಪು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೂಳೂರು ಗ್ರಾಮದ ಕಂಕಣಗುತ್ತು ನಿವಾಸಿ ನಿರಂಜನ ಶೇಖರ ಶೆಟ್ಟಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

Advertisement

ಸಂತ್ರಸ್ತ ಮಹಿಳೆಯೋರ್ವರು ದಾಂಪತ್ಯ ಸಮಸ್ಯೆಯ ಬಗ್ಗೆ ಕೌನ್ಸಿಲಿಂಗ್ ಪಡೆದುಕೊಳ್ಳುವುದಕ್ಕಾಗಿ ಆರೋಪಿಯ “ಸುನಂದಾ ವೆಲ್‌ನೆಸ್‌ ಸೆಂಟರ್‌” ಗೆ ಭೇಟಿ ನೀಡಿದ್ದರೆನ್ನಲಾಗಿದೆ. ಈ ಸಂದರ್ಭ ಕೌನ್ಸಿಲಿಂಗ್ ನೆಪದಲ್ಲಿ ಆರೋಪಿಯು ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಹಿಳೆಯು ಕಾಪು ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಕಾಪು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.