ಕಾಪು : ಕೌನ್ಸಿಲಿಂಗ್ ನೆಪದಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪ- ಆರೋಪಿಯ ಬಂಧನ

ಕಾಪು : ಕೌನ್ಸಿಲಿಂಗ್ ನೆಪದಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ಆರೋಪದಡಿ ಕಾಪು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೂಳೂರು ಗ್ರಾಮದ ಕಂಕಣಗುತ್ತು ನಿವಾಸಿ ನಿರಂಜನ ಶೇಖರ ಶೆಟ್ಟಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

Advertisement

ಸಂತ್ರಸ್ತ ಮಹಿಳೆಯೋರ್ವರು ದಾಂಪತ್ಯ ಸಮಸ್ಯೆಯ ಬಗ್ಗೆ ಕೌನ್ಸಿಲಿಂಗ್ ಪಡೆದುಕೊಳ್ಳುವುದಕ್ಕಾಗಿ ಆರೋಪಿಯ “ಸುನಂದಾ ವೆಲ್‌ನೆಸ್‌ ಸೆಂಟರ್‌” ಗೆ ಭೇಟಿ ನೀಡಿದ್ದರೆನ್ನಲಾಗಿದೆ. ಈ ಸಂದರ್ಭ ಕೌನ್ಸಿಲಿಂಗ್ ನೆಪದಲ್ಲಿ ಆರೋಪಿಯು ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಹಿಳೆಯು ಕಾಪು ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಕಾಪು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.