ಕಾರಿಂಜ : ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

ಕಾರಿಂಜ : ಸ. ಕಿ. ಪ್ರಾ ಶಾಲೆ ಕಾರಿಂಜ ಇಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆಯನ್ನು ಶಾಲಾ ಅಧ್ಯಕ್ಷರಾದ ಜಗನ್ನಾಥ ರೈ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು. ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಆಟೋಟ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾಡಲಾಯಿತು.

Advertisement

ಶಾಲೆಯ ದಾನಿಯಾದ ವಿನಯಕುಮಾರ್ ಇವರನ್ನು ಶಾಲೆಯ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳು, ಅದರ ರಕ್ಷಣೆ ಬಗ್ಗೆ ಮಾಹಿತಿ ನೀಡಲಾಯಿತು. ನಿವೃತ್ತ ಯೋಧರಾದ ಜೆ.ಕೆ ಪೂಜಾರಿ ಇಳಂತಿಲ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮುಖ್ಯಗುರುಗಳಾದ ಗಿರಿಜಾ ಎನ್ ಸ್ವಾಗತಿಸಿದರು. ಸಹಶಿಕ್ಷಕರಾದ ಪರಮೇಶ್ವರ ಎಸ್ ಕಾರ್ಯಕ್ರಮದ ನಿರೂಪಣೆಗೈದರು. ಶಾಲಾ ಉಪಾಧ್ಯಕ್ಷರಾದ ನುಸೈಬ, ಮಾಜಿ ಅಧ್ಯಕ್ಷರಾದ ಓಬಯ್ಯ ಪೂಜಾರಿ ಕಾರಿಂಜ, ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭಾ, ಮಕ್ಕಳ ಪೋಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಊರವರು ಈಸಂದರ್ಭದಲ್ಲಿ ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.