ಸೋಣಂಗೇರಿ : ಸೋಣಂಗೇರಿ ಬಸ್ ನಿಲ್ದಾಣದ ಬಳಿ ಇರುವ ಬಾವಿಗೆ ಬಿದ್ದಿದ್ದ ಕರುವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ವರದಿಯಾಗಿದೆ.
ಸೋಣಂಗೇರಿ ನಿವಾಸಿ ಯೋಗಿಶ್ ಎಂಬವರ ಕರು ಬಸ್ ತಂಗುದಾನದ ಬಳಿ ಇರುವ 15 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಈ ಬಗ್ಗೆ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು, ಊರವರ ಸಹಕಾರದೊಂದಿಗೆ ಸುರಕ್ಷಿತವಾಗಿ ಮೇಲಕೆತ್ತಿ ರಕ್ಷಣೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕಿರಣ್ ಕುಮಾರ್. ಎಸ್, ಸಿಬ್ಬಂದಿಯವರಾದ ಮಹಮ್ಮದ್ ರಫೀಕ್, ಚಂದ್ರಶೇಖರ ನಾಯಕ, ಸಂಜೀವ ಗೌಡ, ಹರ್ಷವರ್ಧನ, ಮೋಹನ್ ಬಾಬು, ಹೊನ್ನಪ್ಪ ಭಾಗವಹಿಸಿದರು.

