ಮತ್ತೆ ಮುನ್ನಲೆಗೆ ಬಂತು ಹಿಜಾಬ್, ಕೇಸರಿ ಕದನ – ಹಾನಗಲ್ಲ ತಾಲೂಕಿನ ಕಾಲೇಜೊಂದರಲ್ಲಿ ಗೊಂದಲ

ಹಾವೇರಿ, ಡಿ. 05 : ಇಡೀ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ ಹಿಜಾಬ್, ಕೇಸರಿ ಶಾಲು ಗೊಂದಲ ಆ ಬಳಿಕ ಸಮವಸ್ತ್ರ ಸಂಹಿತೆಯ ಕಾರಣದಿಂದ ತಣ್ಣಗಾಗಿತ್ತು. ಆದರೀಗ ಮತ್ತೆ ಹಿಜಾಬ್, ಕೇಸರಿ ಶಾಲು ಕದನ ಮುನ್ನಲೆಗೆ ಬಂದಿದ್ದು, ಅದನ್ನು ಕಾಲೇಜು ಆಡಳಿತ ಮಂಡಳಿ ತಣ್ಣಗಾಗಿಸಿದ ಘಟನೆ ವರದಿಯಾಗಿದೆ. ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸುವ ಮೂಲಕ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ಕಾಲೇಜು ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯರಿಗೆ ಒತ್ತಾಯಿಸಿದ ಘಟನೆ ಜಿಲ್ಲೆಯ ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಸಿ.ಜಿ.ಬೆಲ್ಲದ ಕಾಲೇಜಿನಲ್ಲಿ ನಡೆದಿದೆ. ಈಗಾಗಲೇ, ಹಿಜಾಬ್ ಧರಿಸಿ ಕಾಲೇಜಿಗೆ ಬರುವುದನ್ನು ನಿಷೇಧಿಸಲಾಗಿತ್ತು. ಆದರೂ ಹಿಜಾಬ್ ಧರಿಸಿ ಬರುವುದನ್ನು ಉಳಿದಂತಹ ವಿದ್ಯಾರ್ಥಿಗಳು ವಿರೋಧಿಸಿದ್ದಾರೆನ್ನಲಾಗಿದೆ.

Advertisement

ಅಲ್ಲದೇ ಹಿಜಾಬ್ ಧರಿಸಿ ಬಂದವರಿಗೆ ಬಟ್ಟೆ ಬದಲಿಸಲು ಒಂದು ಕೊಠಡಿ ಮೀಸಲಿಡಲಾಗಿತ್ತು. ಆದರೂ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿನಲ್ಲಿ ತರಗತಿ ಹಾಜರಾಗುತ್ತಿದ್ದರು. ಇದನ್ನು ಖಂಡಿಸಿ ಎರಡೂವರೆ ತಿಂಗಳ ಹಿಂದೆಯೇ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು. ಅದಕ್ಕೆ ಕಾಲೇಜಿನ ಆಡಳಿತ ಮಂಡಳಿ ಸ್ಪಂದಿಸದ ಹಿನ್ನೆಲೆಯಲ್ಲಿ ಗುರುವಾರ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಿಗೆ ಹಾಜರಾಗಿದ್ದರು. ಇದು ಕೆಲಕಾಲ ಗೊಂದಲಕ್ಕೆ ಕಾರಣವಾಗಿತ್ತು. ನಂತರ ವಿದ್ಯಾರ್ಥಿಗಳ ಜತೆ ಪ್ರಾಂಶುಪಾಲರು ಮಾತುಕತೆ ನಡೆಸಿ ಗೊಂದಲಕ್ಕೆ ತೆರೆ ಎಳೆದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

⚠️ Contents are protected on this website.