ಮತ್ತೆ ಮುನ್ನಲೆಗೆ ಬಂತು ಹಿಜಾಬ್, ಕೇಸರಿ ಕದನ – ಹಾನಗಲ್ಲ ತಾಲೂಕಿನ ಕಾಲೇಜೊಂದರಲ್ಲಿ ಗೊಂದಲ

ಹಾವೇರಿ, ಡಿ. 05 : ಇಡೀ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ ಹಿಜಾಬ್, ಕೇಸರಿ ಶಾಲು ಗೊಂದಲ ಆ ಬಳಿಕ ಸಮವಸ್ತ್ರ ಸಂಹಿತೆಯ ಕಾರಣದಿಂದ ತಣ್ಣಗಾಗಿತ್ತು. ಆದರೀಗ ಮತ್ತೆ ಹಿಜಾಬ್, ಕೇಸರಿ ಶಾಲು ಕದನ ಮುನ್ನಲೆಗೆ ಬಂದಿದ್ದು, ಅದನ್ನು ಕಾಲೇಜು ಆಡಳಿತ ಮಂಡಳಿ ತಣ್ಣಗಾಗಿಸಿದ ಘಟನೆ ವರದಿಯಾಗಿದೆ. ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸುವ ಮೂಲಕ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ಕಾಲೇಜು ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯರಿಗೆ ಒತ್ತಾಯಿಸಿದ ಘಟನೆ ಜಿಲ್ಲೆಯ ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಸಿ.ಜಿ.ಬೆಲ್ಲದ ಕಾಲೇಜಿನಲ್ಲಿ ನಡೆದಿದೆ. ಈಗಾಗಲೇ, ಹಿಜಾಬ್ ಧರಿಸಿ ಕಾಲೇಜಿಗೆ ಬರುವುದನ್ನು ನಿಷೇಧಿಸಲಾಗಿತ್ತು. ಆದರೂ ಹಿಜಾಬ್ ಧರಿಸಿ ಬರುವುದನ್ನು ಉಳಿದಂತಹ ವಿದ್ಯಾರ್ಥಿಗಳು ವಿರೋಧಿಸಿದ್ದಾರೆನ್ನಲಾಗಿದೆ.

Advertisement

ಅಲ್ಲದೇ ಹಿಜಾಬ್ ಧರಿಸಿ ಬಂದವರಿಗೆ ಬಟ್ಟೆ ಬದಲಿಸಲು ಒಂದು ಕೊಠಡಿ ಮೀಸಲಿಡಲಾಗಿತ್ತು. ಆದರೂ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿನಲ್ಲಿ ತರಗತಿ ಹಾಜರಾಗುತ್ತಿದ್ದರು. ಇದನ್ನು ಖಂಡಿಸಿ ಎರಡೂವರೆ ತಿಂಗಳ ಹಿಂದೆಯೇ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು. ಅದಕ್ಕೆ ಕಾಲೇಜಿನ ಆಡಳಿತ ಮಂಡಳಿ ಸ್ಪಂದಿಸದ ಹಿನ್ನೆಲೆಯಲ್ಲಿ ಗುರುವಾರ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಿಗೆ ಹಾಜರಾಗಿದ್ದರು. ಇದು ಕೆಲಕಾಲ ಗೊಂದಲಕ್ಕೆ ಕಾರಣವಾಗಿತ್ತು. ನಂತರ ವಿದ್ಯಾರ್ಥಿಗಳ ಜತೆ ಪ್ರಾಂಶುಪಾಲರು ಮಾತುಕತೆ ನಡೆಸಿ ಗೊಂದಲಕ್ಕೆ ತೆರೆ ಎಳೆದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.