ಕುಂದಾಪುರ: ‘ಆಶ್ಲೇಷ ಆನ್‌ಲೈನ್ ಸೇವಾ ಕೇಂದ್ರ’ದಲ್ಲಿ ಆಕಸ್ಮಿಕ ಅಗ್ನಿ ಅವಘಡ – ಲಕ್ಷಾಂತರ ರೂ. ನಷ್ಟ

ಕುಂದಾಪುರ, ಫೆ. 17 : ಕಳೆದ ಒಂದು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್‌ಲೈನ್ ಸೇವಾ ಕೇಂದ್ರ’ದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಂಗಡಿಯಲ್ಲಿದ್ದ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಸೋಮವಾರ ರಾತ್ರಿ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಕನ್ನುಕರೆ ಶ್ರೀನವಶಕ್ತಿ ಕಲ್ಯಾಣ ಮಂಟಪದ ಬಳಿ ನಡೆದಿದೆ.

Advertisement

ಸೋಮವಾರ ರಾತ್ರಿ ಸುಮಾರು 9:15ರ ಸುಮಾರಿಗೆ ಈ ಘಟನೆ ನಡೆದಿದೆ. ಅಂಗಡಿಯ ಮಾಲೀಕರಾದ ಫಣಿರಾಜ್ ಹತ್ವಾರ್ ಕೊರವಡಿ ಅವರು ಎಂದಿನಂತೆ ಕೆಲಸ ಮುಗಿಸಿ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಈ ವೇಳೆ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಂಗಡಿಯಲ್ಲಿದ್ದ ಕಂಪ್ಯೂಟರ್, ಪ್ರಿಂಟರ್, ಸ್ಟೇಷನರಿ ವಸ್ತುಗಳು, ಇನ್ವರ್ಟರ್ ಬ್ಯಾಟರಿ, ಕುರ್ಚಿ, ಮೇಜು ಹಾಗೂ ಇತರ ಉಪಕರಣಗಳು ಬೆಂಕಿಗಾಹುತಿಯಾಗಿವೆ. ಈ ಅಗ್ನಿ ಅವಘಡದಿಂದ ಅಂದಾಜು 6 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಕಣ್ಣುಕರೆಯ ವಾದಿರಾಜ್ ಗಾಣಿಗ, ಕಾರ್ತಿಕ್, ಶೇಖರ್ ದೇವಡಿಗ, ಭರತ್ ಮತ್ತು ವಿಘ್ನೇಶ್ ಸೇರಿದಂತೆ ಸ್ಥಳೀಯ ಯುವಕರ ತಂಡ ಬೆಂಕಿ ನಂದಿಸಲು ನೆರವಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.