ಬೆಳ್ತಂಗಡಿ : ಧನು ಪೂಜೆಗೆ ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಯ ಕೊಲೆ..? ಕೊಲೆಗೖದವರು ಯಾರು? – ಸಾವಿನ ಸುತ್ತ ಅನುಮಾನದ ಹುತ್ತ…!

ಬೆಳ್ತಂಗಡಿ:, ಜ. 14 : ಬೆಳಗ್ಗೆ ಧನು ಪೂಜೆಗೆಂದು ದೇವಸ್ಥಾನಕ್ಕೆ ಹೊರಟಿದ್ದ ಬಾಲಕನೊಬ್ಬ ಶವವಾಗಿ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದ್ದು, ಇದೊಂದು ತಲೆಗೆ ಬಲವಾದ ಏಟು ನೀಡಿ ವ್ಯವಸ್ಥಿತ ಕೊಲೆ ಸಾಧ್ಯತೆಯನ್ನು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ದೃಡೀಕರಿಸಿದೆ.

ಗೇರುಕಟ್ಟೆ ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (16) ಮೃತ ಬಾಲಕ. ಧನು ಮಾಸದ ವಿಶೇಷ ಪೂಜೆಯ ಹಿನ್ನೆಲೆಯಲ್ಲಿ ಸುಮಂತ್ ಪ್ರತಿ ದಿನ ನಾಳ ಶ್ರೀದುರ್ಗಾಪರಮೇಶ್ವರಿ ದೇವಾಲಯಕ್ಕೆ ಬೆಳಗ್ಗೆ ಬೇಗ ಎದ್ದು ದೇವಸ್ಥಾನಕ್ಕೆ ಹೋಗುವ ಪರಿಪಾಠ ಬೆಳೆಸಿಕೊಂಡಿದ್ದ. ಅದರಂತೆ ಧನು ಸಂಕ್ರಮಣದ ಕೊನೆಯ ದಿನವಾದ ಬುಧವಾರ ಬೆಳಗ್ಗೆ ಮನೆಯಿಂದ ಬೆಳಗ್ಗೆ 4.30 ಗಂಟೆಗೆ ದೇವಸ್ಥಾನಕ್ಕೆ ತೆರಳಿದ್ದ. ಆದರೆ ಆನಂತರ ಮನೆಗೆ ಹಿಂತಿರುಗದೇ ಇದ್ದಾಗ ಮನೆಯವರು ಹುಡುಕಾಡಿದ್ದು 500 ಮೀಟ‌ರ್ ದೂರದ ಬಾವಿಯಲ್ಲಿ ಶವ ಪತ್ತೆಯಾಗಿತ್ತು.

ಆರಂಭದಲ್ಲಿ ಸುಮಂತ್‌ನನ್ನು ಚಿರತೆ ಒಯ್ದಿರುವ ಬಗ್ಗೆ ಸ್ಥಳಿಯರಲ್ಲಿ ಪ್ರಚಾರ ಹಬ್ಬಿದ್ದು, ಬೆಳ್ತಂಗಡಿ ಅಗ್ನಿಶಾಮಕದಳದ ಸಿಬ್ಬಂದಿಗಳು ಸಮೀಪದ ಕೆರೆಯಲ್ಲಿ ಹುಡುಕಾಡಿದಾಗ ಬಾಲಕನ ದೇಹ ಪತ್ತೆಯಾಗಿತ್ತು. ಬಾಲಕನ ದೇಹದಲ್ಲಿ ಗಾಯದ ಗುರುತುಗಳಿದ್ದು ಇದು ಬಾವಿಗೆ ಬಿದ್ದ ಸಂದರ್ಭದಲ್ಲಿ ಆಗಿರುವ ಗಾಯಗಳೇ ಎಂಬ ಸಂಶಯ ಮೂಡಿತ್ತು. ಸ್ಥಳಕ್ಕೆ ಎಸ್ಪಿ ಅರುಣ್ ಭೇಟಿ ನೀಡಿದ್ದು ಪೋಸ್ಟ್ ಮಾರ್ಟಂ ಬಳಿಕ ತನಿಖೆ ನಡೆಸಿ ಸತ್ಯಾಂಶ ಹೊರತೆಗೆಯುವುದಾಗಿ ತಿಳಿಸಿದ್ದರು.

ತಲೆಗೆ ಬಲವಾದ ಏಟು

ಮೃತ ವಿದ್ಯಾರ್ಥಿ ಸುಮಂತ್ ಮೃತದೇಹವನ್ನು ಮಂಗಳೂರಿನ ಜಿಲ್ಲಾ ವೆಸ್ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿದ್ದು, ತಲೆಗೆ ಕತ್ತಿ ಅಥವಾ ಇತರೆ ಆಯುಧದಿಂದ ಬಲವಾದ 3 ಬಾರಿ ಏಟು ನೀಡಿದ ಗುರುತು ಪತ್ತೆಯಾಗಿದೆ. ಬಲವಾದ ಒಡೆತಕ್ಕೆ ತಲೆ ಒಡೆದೆ ಹೋಗಿತ್ತು, ಸುಮಂತ್ ತಲೆಗೆ ಬಲವಾದ ಏಟು ನೀಡಿ ಕೆರೆ ಬಳಿಗೆ ಎತ್ತಿಕೊಂಡುಹೋಗಿ ಅರೆ ಪ್ರಜ್ಞಾವಸ್ಥೆಯಲ್ಲೇ ನೀರಿಗೆ ಹಾಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಶ್ವಾಸ ಕೋಶಕ್ಕೆ ನೀರು ತುಂಬಿ ಹಾನಿಯಾದ ಬಗ್ಗೆ ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ತಲೆಗೆ ಏಟು ಬಿದ್ದ ಕೂಡಲೇ ಪ್ರಜ್ಞಾವಸ್ಥೆಯಾದ ಕಾರಣ ಸುಮಂತ್‌ಗೆ ಯಾವುದೇ ಪ್ರತಿರೋಧ ನೀಡಲು ಸಾಧ್ಯವಾಗಿಲ್ಲ ಎಂಬ ಅನುಮಾನ ಮೂಡಿದೆ. ಇದಕ್ಕೆ ಸಾಕ್ಷ್ಯನೀಡುವಂತೆ ದೇಹ ಪತ್ತೆಯಾದ ಸಂದರ್ಭ ಮೃತ ಸುಮಂತ್‌ ಕಾಲಿನಲ್ಲೇ ಚಪ್ಪಲಿಗಳು ಇತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಕೊಲೆ ಮಾಡಿದವರು ಯಾರು ? ಯಾಕೆ…?

ಸುಮಂತ್ ಇನ್ನೂ ಕೂಡಾ ಚಿಕ್ಕ ಹುಡುಗ. ಹೀಗಾಗಿ ಯಾವುದೇ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ಕಡಿಮೆ. ಹಾಗಿದ್ದರೆ ಆ ಬಾಲಕನನ್ನು ಕೊಲೆ ಮಾಡಿದ್ದೇ ಆದಲ್ಲಿ ಕೊಲೆ ಮಾಡಿದವರು ಯಾರು ? ಯಾಕೆ ಕೊಲೆ ಮಾಡಲಾಗಿದೆ ಎಂಬ ಸಂಶಯ ಮೂಡುತ್ತಿದೆ. ಹೀಗಾಗಿ ಶೀಘ್ರ ತನಿಖೆ ಅನಿವಾರ್ಯ ಆಗಿದೆ. ಆದಷ್ಟು ಶೀಘ್ರ ತನಿಖೆ ನಡೆಸಿ ಸತ್ಯಾಂಶ ಹೊರಬರಬೇಕಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

⚠️ Contents are protected on this website.