ಮೂಡಬಿದಿರೆ : ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮೂಡಬಿದಿರೆ : ಸ್ಥಳೀಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶಿಸಿದೆ.

Advertisement

ಖಾಸಗಿ ಕಾಲೇಜೊಂದರ ಕ್ಯಾಂಟೀನ್‌ನಲ್ಲಿ ಜೊತೆಗೆ ಕೆಲಸ ಮಾಡಿಕೊಂಡಿದ್ದ ಚೇತನ್ (22) ಮತ್ತು ಚಿದಾನಂದ ಎಂಬವರಿಗೆ ಕ್ಯಾಂಟೀನ್ ನಲ್ಲಿ ಕೆಲಸದ ವಿಚಾರದಲ್ಲಿ ಮತ್ತು ವೈಯುಕ್ತಿಕ ವಿಚಾರದಲ್ಲಿ ಪರಸ್ಪರ ತಕರಾರು ನಡೆದಿತ್ತು. ಆರೋಪಿ ಚಿದಾನಂದ ಪರಶು ನಾಯ್ಕ ಎಂಬಾತನು 2020 ರ ಅ. 10 ರಂದು ಮಧ್ಯರಾತ್ರಿ ಚೇತನ್‌ನನ್ನು ಕೊಲೆ ಮಾಡುವ ಉದ್ದೇಶದಿಂದ ಕಬ್ಬಿಣದ ರಾಡ್‌ ಹಿಡಿದುಕೊಂಡು ಚೇತನ್‌ ವಿಶಾಂತ್ರಿ ಕೊಠಡಿಗೆ ಅಕ್ರಮ ಪ್ರವೇಶ ಮಾಡಿದ್ದನೆಂದು ಆರೋಪಿಸಲಾಗಿತ್ತು. ಅಲ್ಲಿ ರಾಜೇಶ್‌ ಪೂಜಾರಿ ಮತ್ತು ಶಂಕ್ರಪ್ಪ ಜತೆ ನಿದ್ರಿಸುತ್ತಿದ್ದ ಚೇತನ್‌ನನ್ನು ಅವಾಚ್ಯ ಶಬ್ದಗಳಿಂದ ಬೈದು ರಾಡ್‌ನಿಂದ ತಲೆಗೆ, ಮುಖಕ್ಕೆ ಹಲ್ಲೆ ಮಾಡಿದ್ದಲ್ಲದೇ ಮೊಬೈಲ್‌ ಫೋನ್‌ ಜಖಂಗೊಳಿಸಿದ್ದ. ಗಂಭೀರ ಗಾಯಗೊಂಡಿದ್ದ ಚೇತನ್‌ ನ. 9 ರಂದು ಮೃತಪಟ್ಟಿದ್ದರು. ಈ ಬಗ್ಗೆ ಮೂಡುಬಿದಿರೆ ರಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಅಂದಿನ ಪೊಲೀಸ್‌ ನಿರೀಕ್ಷ ಬಿ.ಎಸ್‌ ದಿನೇಶ್ ಕುಮಾರ್‌ ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿದ್ದರು. ನ 1 ರಂದು ಆತನನ್ನು ಬಂಧಿಸಲಾಗಿತ್ತು, ನ್ಯಾಯಾಂಗ ಬಂಧನದಲ್ಲಿದ್ದ. ಪ್ರಕರಣದಲ್ಲಿ ೪೦ ಸಾಕ್ಷಿದಾರರನ್ನು ವಿಚಾರಣೆ ಮಾಡಲಾಗಿದ್ದು, ಇಂದು ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ ವಿ,ಎನ್‌ ಅವರು ಜೀವಾವಧಿ ಶಿಕ್ಷೆಯನ್ನು ವಿಧಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.