ಗರ್ಡಾಡಿ : ಕ್ರೀಡಾ ಪ್ರತಿಭೆಗಳಿಗೆ ಶಾಸಕ ಪೂಂಜಾರಿಂದ ಸಮವಸ್ತ್ರ ವಿತರಣೆ

ಗರ್ಡಾಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್ ಪೂಂಜಾರವರು ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ.

Advertisement

ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಬೆಂಬಲ ನೀಡುವ ಸಲುವಾಗಿ ಕಳೆದ ಏಳು ವರ್ಷಗಳಿಂದ ಕ್ರೀಡಾ ಸಮವಸ್ತ್ರಗಳನ್ನು ಒದಗಿಸುತ್ತಿದ್ದಾರೆ. ಅದೇ ರೀತಿ ಈ ವರ್ಷವೂ ಕೂಡಾ ಸುಮಾರು 70,000 ರೂ. ಮೌಲ್ಯದ ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ. ಹರೀಶ್ ಪೂಂಜಾರವರ ಮನೆಯಲ್ಲಿ ಸಾಂಕೇತಿಕವಾಗಿ ತಾಲೂಕಿನ ಕ್ರೀಡಾ ಪ್ರತಿಭೆಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯಾ ಬಿ., ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೃಷ್ಣನಂದ ರಾವ್, ದ.ಕ. ಜಿಲ್ಲೆಯ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರವಿರಾಜ್ ಗೌಡ, ಬೆಳ್ತಂಗಡಿ ತಾಲೂಕು ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ, ಬೆಳ್ತಂಗಡಿ ತಾಲೂಕು ಗ್ರೇಡ್ – 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅಖಿಲ್ ಕುಮಾರ್, ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಪದಾಧಿಕಾರಿ ಅಜಿತ್ ಕುಮಾರ್ ಹಾಗೂ ಹಲವರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.