ಚಿಕ್ಕಮಗಳೂರು : ಅಪಘಾತದ ಪರಿಹಾರ ನೀಡದ ಹಿನ್ನಲೆ – ರಸ್ತೆ ಮಧ್ಯೆಯೇ ತಡೆದು 2 ಸರ್ಕಾರಿ ಬಸ್ ವಶಕ್ಕೆ ಪಡೆದ ವಕೀಲರು

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು, ಫೆ. 14 : ಅಪಘಾತ ಪರಿಹಾರ ಕೊಡದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಡಿಪೋಗೆ ಸೇರಿದ ಸರಕಾರಿ ಬಸ್ ಅನ್ನು ನ್ಯಾಯಾಲಯದ ಆದೇಶದ ಮೇರೆಗೆ ವಕೀಲರ ತಂಡ ಚನ್ನರಾಯಪಟ್ಟಣದಲ್ಲಿ ವಶಕ್ಕೆ ಪಡೆದಿರುವ ಘಟನೆ ಶುಕ್ರವಾರ ನಡೆದಿದೆ.

Advertisement

ವಾಹನ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ನಾಗರತ್ನಮ್ಮ ಎಂಬವರಿಗೆ 12.41 ಲಕ್ಷ ರೂ. ಪರಿಹಾರದ ಹಣ ಕ್ಲೈಮ್ ಆಗದಿದ್ದಕ್ಕೆ ಪ್ರಯಾಣಿಕರನ್ನು ಇಳಿಸಿ ವಾಹನ ಸೀಜ್ ಮಾಡಲಾಗಿದೆ. ಎರಡು ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಇಳಿಸಿ ವಕೀಲರ ತಂಡ ಬಸ್ಸನ್ನು ವಶಕ್ಕೆ ಪಡೆದಿದೆ. ಪೊಲೀಸರನ್ನು ಕರೆ ತರದೇ, ಮಾಹಿತಿಯನ್ನು ನೀಡದೇ ಏಕಾಏಕಿ ವಾಹನ ವಶಕ್ಕೆ ಪಡೆದ ವಕೀಲರ ಕ್ರಮವನ್ನು ಪ್ರಯಾಣಿಕರು ಖಂಡಿಸಿದ್ದಾರೆ. ಏಕಾಏಕಿ ಬಸ್ ವಶಕ್ಕೆ ಪಡೆದುದರಿಂದ ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಯಿತು.

ಅಪಘಾತದ ಹಣ ಕ್ಲೈಮ್ ಆಗದಿದ್ದಕ್ಕೆ ನ್ಯಾಯಾಲಯದಿಂದ ಗಾಡಿ ಜಪ್ತಿಗೆ ಆದೇಶ ಪಡೆಯಲಾಗಿತ್ತು. ಮೂವರು ವಕೀಲರ ತಂಡದಿಂದ ಎರಡು ಸರಕಾರಿ ಬಸ್ ಜಪ್ತಿ ಮಾಡಿ ವಾಹನವನ್ನು ಚನ್ನರಾಯಪಟ್ಟಣ ಕೋರ್ಟ್ ಆವರಣಕ್ಕೆ ತಂದು ನಿಲ್ಲಿಸಲಾಗಿದೆ. ರಸ್ತೆ ಮಧ್ಯೆ ಇಳಿಸಿದ್ದರಿಂದ ಸರಕಾರದ ವಿರುದ್ಧ ಎರಡೂ ಬಸ್ಸಿನ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಿಂದ ಶೃಂಗೇರಿಗೆ ಬಂದು ಬೆಂಗಳೂರಿಗೆ ಹೋಗುತ್ತಿದ್ದ ಮತ್ತು ಬೆಂಗಳೂರಿನಿಂದ ಮತ್ತೆ ಚಿಕ್ಕಮಗಳೂರಿಗೆ ಬರುವಾಗ ಮಾರ್ಗ ಮಧ್ಯೆ ಬಸ್ಸುಗಳನ್ನು ತಡೆಯಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.