ಮಂಗಳೂರು : ಶ್ರೀ ವಾಜಂಗಳಾಯ ದೈವಸ್ಥಾನ ಕುಡೇಲಿನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಮಂಗಳೂರು, ಫೆ. 12 : ಮಂಜೇಶ್ವರದ ಕಾರಣಿಕ ಕ್ಷೇತ್ರ ಕುಡೇಲಿನಲ್ಲಿ ಪತ್ರೀ ವರ್ಷದಂತೆ ಈ ಬಾರಿಯೂ ಕೂಡ ನೇಮೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಈಗಾಗಲೇ ಪೂರ್ವ ಸಿದ್ಧತೆಗಳು ನಡೆಯುತ್ತಿದೆ. ಫೆ.13 ಮತ್ತು 14ರಂದು ವಾರ್ಷಿಕ ನೇಮೋತ್ಸವ ವಿಜೃಂಭಣೆಯಿಂದ ನಡೆಯಲಿದೆ.

Advertisement

ಫೆ.13ರಂದು ನೇಮೋತ್ಸವದ ಚಪ್ಪರ ಏರಿಸುವುದು.ಬಳಿಕ ಶ್ರೀ ಕ್ಷೇತ್ರದ ತಂತ್ರಿಗಳಿಂದ ಶ್ರೀ ನಾಗದೇವರಿಗೆ ಆಶ್ಲೇಷಾ ಪೂಜೆ ಪಂಚಾಮೃತ ಅಭಿಷೇಕ, ನಾಗತಂಬಿಲ ಸೇವೆ, ದೈವಗಳಿಗೆ ಹೂವಿನ ಪೂಜೆ ಸತ್ಯನಾರಾಯಣ ಪೂಜೆ ನಡೆಯಲಿದೆ ಮತ್ತು ಅದೇ ದಿನ ಸಂಜೆ ಶ್ರೀ ದೈವಗಳ ಭಂಡಾರ ದೈವಸ್ಥಾನದಿಂದ ಹೊರಟು, ಭಂಡಾರ ಏರುವುದು. ರಾತ್ರಿ 8 ಗಂಟೆಗೆ ಮಹಿಷಂದಾಯ ದೈವದ ನೇಮ ನಂತರ ಅನ್ನಸಂತರ್ಪಣೆ ರಾತ್ರಿ 10 ಗಂಟೆಗೆ ವಾಜಂಗಳಾಯ ಮತ್ತು ಬಂಟ ದೈವದ ನೇಮ ನಂತರ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ ನಡೆಯಲಿದೆ.

ಫೆ.14ರ ಶನಿವಾರ ರಾತ್ರಿ ಕಲ್ಲುರ್ಟಿ ಪಂಜುರ್ಲಿ ದೈವದ ಕೋಲ – ನಂತರ ಅನ್ನಸಂತರ್ಪಣೆ ಬಳಿಕ ಕೊರತಿ ಕೋಲ – ಗುಳಿಗ ದೈವಕ್ಕೆ ಕೆಂಡ ಸೇವೆ ನಡೆಯಲಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.