ಸುಬ್ರಹ್ಮಣ್ಯ : ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ – ಇಂದಿನಿಂದ ಸರ್ಪಸಂಸ್ಕಾರ ಸೇವೆ ಪುನರಾರಂಭ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಮಂಗಳವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಮಾಪ್ತಿಗೊಂಡಿತು. ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ಹಾಗೂ ಮುಂಜಾನೆ ದೇವಸ್ಥಾನದ ಪ್ರಧಾನ ಅರ್ಚಕ ವೇ| ಮೂ| ಸೀತಾರಾಮ ಎಡಪಡಿತ್ತಾಯರು ವಿಧಿ ವಿಧಾನ ನೆರವೇರಿಸಿದರು. ಬಳಿಕ ಕೊಪ್ಪರಿಗೆಯನ್ನು ಇಳಿಸಲಾಯಿತು.

Advertisement

ಉತ್ಸವದ ನಿಮಿತ್ತ ಶ್ರೀ ದೇಗುಲದ ಹೊರಾಂಗಣದ ಸುತ್ತಲೂ ನೀರನ್ನು ಮಧ್ಯಾಹ್ನದ ಅನಂತರ ತುಂಬಿಸಲಾಗಿತ್ತು. ರಾತ್ರಿ ಮಹಾ ಪೂಜೆಯ ಬಳಿಕ ನೀರಿನಲ್ಲಿ ಶ್ರೀ ದೇವರ ದೀಪಾರಾಧನೆಯುಕ್ತ ಪಲ್ಲಕ್ಕಿ ಉತ್ಸವ ಆರಂಭವಾಯಿತು. ಅನಂತರ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯಿತು.
ಶ್ರೀ ಕ್ಷೇತ್ರದಲ್ಲಿ ಡಿ. 3ರಂದು ಸರ್ಪಸಂಸ್ಕಾರ ಸೇವೆ ಪುನರಾರಂಭಗೊಳ್ಳಲಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.