ಕುಂದಾಪುರ : ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು – ಭಯಾನಕ ದೃಶ್ಯ ಸಿಸಿಟಿವಿ’ಯಲ್ಲಿ ಸೆರೆ

ಕುಂದಾಪುರ, ಜೂ. 09 : ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಕೋಟೇಶ್ವರ-ಹಾಲಾಡಿ ರಸ್ತೆಯ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ.

Advertisement

ಕೋಟೇಶ್ವರ ಮಾರ್ಕೋಡು ನಿವಾಸಿ ಪ್ರದೀಪ್ ಪೂಜಾರಿ (35) ಮೃತ ಯುವಕ. ಇವರು ಗಾರೆ ಕೆಲಸ ಮಾಡಿಕೊಂಡಿದ್ದರು.

ಘಟನೆ ವಿವರ : ಉಡುಪಿ ಕಡೆಯಿಂದ ಬಂದು ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಮೂಲಕ ಅಂಡರ್‌ಪಾಸ್‌ನಲ್ಲಿ ಬೃಹತ್ ಕಂಟೇನರ್ ಲಾರಿಯೊಂದು ಯು-ಟರ್ನ್ ಪಡೆಯಲು ಮುಂದಕ್ಕೆ ಸಾಗುವಾಗ ಪೇಟೆ ಕಡೆಯಿಂದ ಹಾಲಾಡಿ ರಸ್ತೆಗೆ ತೆರಳುತ್ತಿದ್ದ ಬೈಕ್‌‌ಗೆ ಡಿಕ್ಕಿ ಹೊಡೆದಿದ್ದು ಬೈಕ್ ಸಹಿತ ಕೆಳಕ್ಕೆ ಬಿದ್ದ ಪ್ರದೀಪ್ ಪೂಜಾರಿಯವರ ಮೇಲೆ ಲಾರಿ ಹತ್ತಿದ್ದರಿಂದ ಗಂಭೀರ ಗಾಯಗೊಂಡು ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.

ಕುಂದಾಪುರ ಸಂಚಾರಿ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಅನೂಪ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಸರ್ಕಾರಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಔಷಧಿ ವಿಭಾಗದ ಮುಖ್ಯಸ್ಥನ ವಿರುದ್ಧ ದೂರು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಕೊಚ್ಚಿ ಅಂಬಡಬೆಟ್ಟು ಹೋಗಿದ್ದ ತಾತ್ಕಾಲಿಕ ರಸ್ತೆಗೆ ಮರು ಜೀವ  – ಶಾಸಕ ಹರೀಶ್ ಪೂಂಜಾರಿಂದ ಸ್ಪಂದನೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕಲ್ಮಂಜ : 2 ಸೇತುವೆಗಳು ಕಾಮಗಾರಿ ಹಿನ್ನಲೆ : ಮುಂಡಾಜೆ – ಧರ್ಮಸ್ಥಳ ರಸ್ತೆ ಸಂಚಾರ ಸ್ಥಗಿತ !

⚠️ Contents are protected on this website.